5 ಹುಲಿಗಳ ಸಾವು: ಎಂಎಂ ಹಿಲ್ಸ್ ಡಿಸಿಎಫ್, ಎಸಿಎಫ್‌ ಸೇರಿ ಮೂವರು ಅಧಿಕಾರಿಗಳಿಗೆ 3 ತಿಂಗಳು ಕಡ್ಡಾಯ ರಜೆ

ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಸೋಮವಾರ ಹೇಳಿದ್ದಾರೆ.
tigress, 4 cubs found dead
ಎಂಎಂ ಹಿಲ್ಸ್ ನಲ್ಲಿ ಸತ್ತ ಹುಲಿಗಳು
Updated on

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಒಂಬತ್ತು ವರ್ಷದ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವನ್ನಪ್ಪಿದ ನಂತರ, ಅರಣ್ಯ ಪಡೆಯ ಮುಖ್ಯಸ್ಥರಾದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋಮವಾರ ಮೂವರು ಸಿಬ್ಬಂದಿಯನ್ನು ಮೂರು ತಿಂಗಳ ಕಡ್ಡಾಯ ರಜೆಯ ಮೇಲೆ ಕಳುಹಿಸಿ ಆದೇಶ ಹೊರಡಿಸಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ ಚಕ್ರಪಾಣಿ, ಹನೂರು ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಣ್ಣ ಹೆಗ್ಡೆ ಮತ್ತು ವನ್ಯಜೀವಿ ಶ್ರೇಣಿ ವಲಯ ಅರಣ್ಯ ಅಧಿಕಾರಿ-ಕಮ್-ಸರ್ವೇಯರ್ ಮಾದೇಶ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.

ಬೆಂಗಳೂರು ಪ್ರಧಾನ ಕಚೇರಿಯ ಡಿಸಿಎಫ್ ಸಂತೋಷ್ ಕುಮಾರ್ ಜಿ ಅವರಿಗೆ ಚಕ್ರಪಾಣಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಹೆಗ್ಡೆ ಮತ್ತು ಮಾದೇಶ್ ಅವರ ಬದಲಿಗೆ ಸ್ಟುಪಿಲ್ ಮನೋಹರ್ ಅಹಿರೆ ಮತ್ತು ಉಮಾಪತಿ ಕೆ ಅವರನ್ನು ಕ್ರಮವಾಗಿ ಎಸಿಎಫ್ ಮತ್ತು ಆರ್‌ಎಫ್‌ಒಗಳಾಗಿ ನೇಮಿಸಲಾಗಿದೆ.

tigress, 4 cubs found dead
'ಸೇಡು ತೀರಿಸಿಕೊಳ್ಳಲು ವಿಷಪ್ರಾಶನ'; ಹುಲಿ, ನಾಲ್ಕು ಮರಿಗಳ ಸಾವಿಗೆ ಕಾರಣವಾದ ಮೂವರ ಬಂಧನ

ಕೇಂದ್ರ ಸರ್ಕಾರದ ಆದೇಶದ ಪ್ರಕಾರ, ಯಾವುದೇ ಅಧಿಕಾರಿಯನ್ನು ಮೂರು ತಿಂಗಳಿಗಿಂತ ಹೆಚ್ಚು ಕಾಲ ರಜೆ ಅಥವಾ ಅಮಾನತುಗೊಳಿಸುವಂತಿಲ್ಲ ಎಂದು ಅರಣ್ಯ ಇಲಾಖೆಯ ಮೂಲಗಳು ವಿವರಿಸಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಸೋಮವಾರ ಹೇಳಿದ್ದಾರೆ.

ಜುಲೈ 27 ರಂದು ಗಸ್ತು ತಂಡ, ಐದು ಹುಲಿಗಳ ಮೃತದೇಹವನ್ನು ಪತ್ತೆ ಹಚ್ಚಿದ ನಂತರ ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿನ ಸುದ್ದಿ ಬೆಳಕಿಗೆ ಬಂದಿತು. ಮರಣೋತ್ತರ ಪರೀಕ್ಷೆಯಲ್ಲಿ ವಿಷಪ್ರಾಶನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಜುಲೈ 28 ರಂದು ಮೂವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com