ಡಿಕೆಶಿ ಸಾಹೇಬರು ಹೇಳಿದ್ದರಲ್ಲಿ ತಪ್ಪಿಲ್ಲ: ಡಿಸಿಎಂ ನಟ್ಟು-ಬೋಲ್ಟ್ ಹೇಳಿಕೆ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ

ಸಾಹೇಬ್ರು ಹೇಳಿದ್ರಲ್ಲಿ ಏನೂ ತಪ್ಪಿಲ್ಲ. ಅವರು ಹೇಳಿದ್ದು ಸರಿಯಾಗಿದೆ. ಕಲಾವಿದರಾಗಿ ನಮಗೆ ಒಂದು ಜವಾಬ್ದಾರಿ ಇದ್ದೇ ಇರುತ್ತದೆ. ಡಾ. ರಾಜ್​ಕುಮಾರ್​ ಅವರನ್ನು ನೋಡಿ.. ಕನ್ನಡ ಭಾಷೆಗಾಗಿ ಅವರು ಎಷ್ಟು ಹೋರಾಟ ಮಾಡಿದ್ದಾರೆ.
Ramya
ರಮ್ಯಾ
Updated on

ಹೊಸಪೇಟೆ: ನೆಲ, ಜಲ, ಭಾಷೆ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದನ್ನು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಸಮರ್ಥಿಸಿಕೊಂಡಿದ್ದಾರೆ.

ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಭಾಗವಹಿಸುವುದಕ್ಕೂ ಮುನ್ನ ಹಂಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಹೇಬ್ರು ಹೇಳಿದ್ರಲ್ಲಿ ಏನೂ ತಪ್ಪಿಲ್ಲ. ಅವರು ಹೇಳಿದ್ದು ಸರಿಯಾಗಿದೆ. ಕಲಾವಿದರಾಗಿ ನಮಗೆ ಒಂದು ಜವಾಬ್ದಾರಿ ಇದ್ದೇ ಇರುತ್ತದೆ. ಡಾ. ರಾಜ್​ಕುಮಾರ್​ ಅವರನ್ನು ನೋಡಿ.. ಕನ್ನಡ ಭಾಷೆಗಾಗಿ ಅವರು ಎಷ್ಟು ಹೋರಾಟ ಮಾಡಿದ್ದಾರೆ. ಸಿನಿಮಾ ಮತ್ತು ರಾಜಕೀಯದ ನಡುವೆ ಮೊದಲು ಇದ್ದ ಬೆಂಬಲ, ಪ್ರೋತ್ಸಾಹ ಇವತ್ತು ನನಗೆ ಕಾಣಿಸುತ್ತಿಲ್ಲ’ ಎಂದಿದ್ದಾರೆ ರಮ್ಯಾ.

ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು, ನಮಗೆ ಒಂದು ಜವಾಬ್ದಾರಿ ಇರುತ್ತದೆ ಎಂದು ಓರ್ವ ನಟಿಯಾಗಿ ನಾನು ಭಾವಿಸುತ್ತೇನೆ. ನಮ್ಮ ಭಾಷೆ, ಜಾಗ, ಸಂಸ್ಕೃತಿಗೆ ನಾವು ಯಾವಾಗಲೂ ಬೆಂಬಲ ನೀಡಬೇಕು. ಹಾಗಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದರಲ್ಲಿ ನನಗೆ ಏನೂ ತಪ್ಪು ಎನಿಸಲಿಲ್ಲ’ ಎಂದು ರಮ್ಯಾ ಅವರು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆ ವಿಷಯಕ್ಕೆ ಕಲಾವಿದರು ಬೆಂಬಲ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ ಇಂಥವರ ನಟ್ಟು ಬೋಲ್ಟ್ ಟೈಟ್ ಮಾಡುವುದು ಕೂಡ ತಮಗೆ ಗೊತ್ತು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ಚರ್ಚೆ ಜೋರಾಗಿ ನಡೆಯುತ್ತಿದೆ.

Ramya
BIFFes ಉದ್ಘಾಟನೆ: ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡುವೆ; ಡಿ.ಕೆ ಶಿವಕುಮಾರ್ ಎಚ್ಚರಿಕೆ ಯಾರಿಗೆ?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com