ಬಂಡೀಪುರ: ರೆಸಾರ್ಟ್ ನಲ್ಲಿ ತಂಗಿದ್ದ ದಂಪತಿ, ಮಗು ಅಪಹರಣ!

ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ.
ನಿಶಾಂತ್, ಚಂದನ
ನಿಶಾಂತ್, ಚಂದನ
Updated on

ಮೈಸೂರು: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಸೋಮವಾರ ನಡೆದಿದೆ.

ನಿಶಾಂತ್ ಮತ್ತು ಚಂದನ ದಂಪತಿಗಳು ತಮ್ಮ ಮಗುವಿನೊಂದಿಗೆ ಭಾನುವಾರ ರಾತ್ರಿ ಬಂಡೀಪುರ ಸಮೀಪದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ.

ಬಳಿಕ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಡಿವೈಎಸ್‌ಪಿ ಲಕ್ಷ್ಮಯ್ಯ ನೇತೃತ್ವದ ಪೊಲೀಸ್ ತಂಡ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿತು. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರೀಶೀಲನೆ ನಡೆಸಿತು.

ಘಟನೆಯ ಕುರಿತು ಮಾತನಾಡಿದ ಎಸ್‌ಪಿ ಬಿ.ಟಿ. ಕವಿತಾ, ಸೋಮವಾರ ಮಧ್ಯಾಹ್ನ 1 ಗಂಟೆಗೆ ಘಟನೆಗೆ ಈ ಬಗ್ಗೆ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಎರಡು ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ಪತಿ, ಪತ್ನಿ ಮತ್ತು ಮಗುವನ್ನು ಕರೆದುಕೊಂಡು ಹೋಗಿದ್ದಾರೆಂದು ಹೇಳಿದರು. ಸಂಬಂಧಿಕರು ಅವರನ್ನು ಕರೆದುಕೊಂಡು ಹೋಗಿದ್ದಾರೋ ಅಥವಾ ಬೇರೆ ಯಾರಾದರೂ ಕರೆದುಕೊಂಡು ಹೋಗಿದ್ದಾರೋ ಎಂಬುದು ತಿಳಿದಿಲ್ಲ. ಅವರನ್ನು ಯಾರು ಕರೆದುಕೊಂಡು ಹೋದರು ಎಂಬುದರ ಬಗ್ಗೆ ರೆಸಾರ್ಟ್‌ಗೂ ಯಾವುದೇ ಮಾಹಿತಿ ಇಲ್ಲ. ಅದು ಅಪಹರಣವಾಗಿದ್ದರೆ, ಪ್ರತಿರೋಧ ಎದುರಾಗುತ್ತಿತ್ತು. ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ನಿಶಾಂತ್, ಚಂದನ
ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್‌ ಪತ್ತೆ: ಅಪಹರಣ ಪ್ರಕರಣ ಸುಖಾಂತ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com