ಬೆಂಗಳೂರು: ಜಾಮೀನಿನ ಮೇಲೆ ಹೊರ ಬಂದಿದ್ದ ವ್ಯಕ್ತಿ ಆತ್ಮಹತ್ಯೆ; ಪೊಲೀಸರೇ ಕಾರಣ ಎಂದ ಪತ್ನಿ!

ಸುಂಕದಕಟ್ಟೆಯ ಶ್ರೀನಿವಾಸನಗರ ನಿವಾಸಿ ವಿ ಮಹದೇವಯ್ಯ ಎಂಬುವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜನರೇಟರ್ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದರು.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ 49 ವರ್ಷದ ವ್ಯಕ್ತಿಯೊಬ್ಬರು ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಂಕದಕಟ್ಟೆಯ ಶ್ರೀನಿವಾಸನಗರ ನಿವಾಸಿ ವಿ ಮಹದೇವಯ್ಯ ಎಂಬುವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜನರೇಟರ್ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದರು.

ಮಹದೇವಯ್ಯ ಅವರ ಆತ್ಮಹತ್ಯೆಗೆ ರಾಜಗೋಪಾಲನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಿವಶಂಕರ್ ಕಾರಣ ಎಂದು ಅವರ ಪತ್ನಿ ಆರೋಪಿಸಿದ್ದಾರೆ. ವಿಚಾರಣೆ ನೆಪದಲ್ಲಿ ಇನ್ಸ್‌ಪೆಕ್ಟರ್ ತನ್ನ ಪತಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ಮಧ್ಯಾಹ್ನ ಪೊಲೀಸ್ ಆಯುಕ್ತರ ಕಚೇರಿಗೆ ಇನ್ಸ್‌ಪೆಕ್ಟರ್‌ಗೆ ಸಮನ್ಸ್‌ ನೀಡಿ ವಿವರಣೆ ನೀಡಲಾಗಿತ್ತು.

ರಾಜಗೋಪಾಲನಗರದ ಖಾಲಿ ನಿವೇಶನಕ್ಕೆ ನಕಲಿ ಆಸ್ತಿ ಪತ್ರ ಸೃಷ್ಟಿಸಿದ ಆರೋಪದ ಮೇಲೆ ಮಹದೇವಯ್ಯ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಅವರು ಪ್ರಕರಣದಲ್ಲಿ ನಂಬರ್ 3 ಆರೋಪಿಯಾಗಿದ್ದರು. ಶಿವಶಂಕರ್ ಎಂಬುವರು ಮಹಾದೇವಯ್ಯ ಆನಂದ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ದ ಎಫ್‌ಐಆರ್ ದಾಖಲಾಗಿತ್ತು. ಇನ್ಸ್ ಪೆಕ್ಟರ್ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಇನ್ಸ್‌ಪೆಕ್ಟರ್‌ ತಪ್ಪಿತಸ್ಥರೆಂದು ಕಂಡುಬಂದರೆ ಅವರ ಮೇಲೂ ಕ್ರಮ ಜರುಗಿಸಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Representational image
ಬೆಳಗಾವಿ: ಕುಡುಕ ಪತಿಯ ಕಾಟ; ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com