ಕಲಬುರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಯುವಕರು ಸಾವು

ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಸೇಡಂ ತಾಲ್ಲೂಕಿನ ಹಾಬಾಳ ಗ್ರಾಮದ ನಿವಾಸಿಗಳಾದ ಸಿದ್ದು (25), ಸುರೇಶ (20), ಮಲ್ಲಿಕಾರ್ಜುನ (20), ಪ್ರಕಾಶ್‌ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತ ಯುವಕರು
ಮೃತ ಯುವಕರು
Updated on

ಕಲಬುರಗಿ: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ(ಟಿ) ಗ್ರಾಮದ ಬಳಿ ಶುಕ್ರವಾರ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ.

ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಸೇಡಂ ತಾಲ್ಲೂಕಿನ ಹಾಬಾಳ ಗ್ರಾಮದ ನಿವಾಸಿಗಳಾದ ಸಿದ್ದು (25), ಸುರೇಶ (20), ಮಲ್ಲಿಕಾರ್ಜುನ (20), ಪ್ರಕಾಶ್‌ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿನಿಂದ ಬರುತ್ತಿದ್ದ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ.

ಮೃತ ಯುವಕರು
ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ಮೂಲದ ಐವರು ಮಾದಪ್ಪ ಭಕ್ತರ ದಾರುಣ ಸಾವು

ಪಲ್ಸರ್ ಮತ್ತು ಸ್ಪ್ಲೈಂಡರ್ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಲ್ಲಿಕಾರ್ಜುನ ಮತ್ತು ಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುರೇಶ ಹಾಗೂ ಪ್ರಕಾಶ್ ಇಬ್ಬರು ಆಸ್ಪತ್ರೆಗೆ ರವಾನಿಸಿದ ವೇಳೆ ಮೃತಪಟ್ಟಿದ್ದಾರೆ ಎಂದು ಸೇಡಂ ಪೊಲೀಸರು ತಿಳಿಸಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com