ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ಎಲ್ಲಾ ವರ್ಗದ ಜನರು ಸಂತೋಷಪಡುವಂತಹ ಉಡುಗೊರೆ: ಡಿ.ಕೆ ಶಿವಕುಮಾರ್

ರಾಜ್ಯ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ
Siddaramaiah and dk shivakumar
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
Updated on

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜ್ಯ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ” ಎಂದು ತಿಳಿಸಿದರು.

1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್” ಎಂದು ತಿಳಿಸಿದರು. ನಾವು ಎಲ್ಲಾ ವರ್ಗದವರನ್ನು ಓಲೈಕೆ ಮಾಡಬೇಕಲ್ಲವೇ. ಎಲ್ಲರನ್ನು ಸಮಾನವಾಗಿ ನೋಡಬೇಕು” ಎಂದು ತಿಳಿಸಿದರು. ಇದು ಕೇವಲ ನನ್ನ ಕನಸಲ್ಲ. ರಾಜ್ಯ ಹಾಗೂ ದೇಶದ ಕನಸು. ಕೇಂದ್ರ ಸರ್ಕಾರವಂತೂ ಬೆಂಗಳೂರಿಗೆ ಏನು ನೀಡಲಿಲ್ಲ. ನಮ್ಮ ಸರ್ಕಾರವಾದರೂ ನೀಡಬೇಕಲ್ಲವೇ” ಎಂದು ತಿಳಿಸಿದರು.

Siddaramaiah and dk shivakumar
ಮಹಿಳಾ ಪರ ಬಜೆಟ್ ಎಂದು ಕೊಂಡಾಡಿದ ಲಕ್ಷ್ಮೀ ಹೆಬ್ಬಾಳ್ಕರ್; ಉದ್ಯೋಗ ಸೃಷ್ಟಿಯತ್ತ ಗಮನವೇ ಹರಿಸಿಲ್ಲ- BJP ಟೀಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com