ಮಹಿಳಾ ವೈದ್ಯರಿಗೆ ಭದ್ರತೆ: ರಾಜ್ಯ ಸರ್ಕಾರದಿಂದ ಸುರಕ್ಷತಾ ಶಿಷ್ಟಾಚಾರ ಕೈಪಿಡಿ ಬಿಡುಗಡೆ

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರು, ಮಹಿಳಾ ಆರೋಗ್ಯ ವೃತ್ತಿಪರರ ಸುರಕ್ಷತೆಯನ್ನು ಹೆಚ್ಚಿಸಲು ಸರ್ಕಾರ ಹಲವಾರು ನಿಯಮಗಳನ್ನು ಪರಿಚಯಿಸಿದೆ ಎಂದು ಹೇಳಿದ್ದಾರೆ.
ಮೊಹಮ್ಮದ್ ಮೊಹ್ಸಿನ್
ಮೊಹಮ್ಮದ್ ಮೊಹ್ಸಿನ್
Updated on

ಬೆಂಗಳೂರು: ರಾಜ್ಯದಾದ್ಯಂತ, ವೈದ್ಯರು, ನರ್ಸ್ ಗಳು ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ ಆರೋಗ್ಯ ವೃತ್ತಿಪರರು ರಾತ್ರಿಯಿಡೀ ಅವಿಶ್ರಾಂತವಾಗಿ ಕೆಲಸ ಮಾಡುವ ಮೂಲಕ ಲಕ್ಷಾಂತರ ಜನರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುತ್ತಾರೆ.

6,000 ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳು, 30 ಪ್ರಮುಖ ಜಿಲ್ಲಾ ಆಸ್ಪತ್ರೆಗಳು, 175 ತಾಲ್ಲೂಕು ಆಸ್ಪತ್ರೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 60ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ತಮ್ಮದೇ ಆದ ಆಸ್ಪತ್ರೆಗಳನ್ನು ಹೊಂದಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಿಬ್ಬಂದಿಯಲ್ಲಿ ಸುಮಾರು ಶೇ. 30 ರಷ್ಟು ಮಹಿಳೆಯರಿದ್ದಾರೆ. ಅವರಲ್ಲಿ ಹಲವರು ತಡರಾತ್ರಿಯವರೆಗೆ ದೂರದ ಪ್ರದೇಶಗಳಲ್ಲಿ ಮತ್ತು ತುರ್ತು ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಾರೆ.

ಆದರೆ ಕೋಲ್ಕತ್ತಾದ ಆರ್‌ಜಿ ಕಾರ್ ಇನ್‌ಸ್ಟಿಟ್ಯೂಟ್‌ನಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಆಘಾತಕಾರಿ ಅತ್ಯಾಚಾರ ಮತ್ತು ಕೊಲೆಯ ನಂತರ, ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆಯು ತುರ್ತು ಕಾಳಜಿಯ ವಿಷಯವಾಗಿದೆ. ಹೀಗಾಗಿ ಕರ್ನಾಟಕ ಈಗ ನಿರ್ಣಾಯಕ ಕ್ರಮ ಕೈಗೊಳ್ಳುತ್ತಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರು, ಮಹಿಳಾ ಆರೋಗ್ಯ ವೃತ್ತಿಪರರ ಸುರಕ್ಷತೆಯನ್ನು ಹೆಚ್ಚಿಸಲು ಸರ್ಕಾರ ಹಲವಾರು ನಿಯಮಗಳನ್ನು ಪರಿಚಯಿಸಿದೆ ಎಂದು ಹೇಳಿದ್ದಾರೆ.

ಮೊಹಮ್ಮದ್ ಮೊಹ್ಸಿನ್
ಕಲಬುರಗಿ: ಸಚಿವರ ಬೆಂಬಲಿಗರಿಂದ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ಖಂಡಿಸಿ ಪಾಲಿಕೆ ಸಿಬ್ಬಂದಿ ಪ್ರತಿಭಟನೆ

ಮಹಿಳಾ ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಾದ ಮಾರ್ಗಸೂಚಿಗಳನ್ನು ವಿವರಿಸುವ ವೈಲೆಟ್ ಬುಕ್ ಎಂದು ಕರೆಯಲ್ಪಡುವ ವಿಶೇಷ ಸುರಕ್ಷತಾ ಪ್ರೋಟೋಕಾಲ್ ಕೈಪಿಡಿಯ ಬಿಡುಗಡೆಯು ಅತ್ಯಂತ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರೊಂದಿಗೆ ಸಮಾಲೋಚಿಸಿ ಸಿದ್ಧಪಡಿಸಲಾದ ಈ ಕೈಪಿಡಿಯನ್ನು ಶೀಘ್ರದಲ್ಲೇ ಸಾರ್ವಜನಿಕಗೊಳಿಸಲಾಗುವುದು ಎಂದರು.

ಸುರಕ್ಷತೆಯನ್ನು ಕೇವಲ ಅಕ್ಷರ ರೂಪದಲ್ಲಿ ಜಾರಿಗೊಳಿಸಬಾರದು, ಬದಲಾಗಿ ಅದನ್ನು ಕಾರ್ಯಗತಗೊಳಿಸಬೇಕು. ಪ್ರತಿಯೊಬ್ಬ ಮಹಿಳಾ ಆರೋಗ್ಯ ವೃತ್ತಿಪರರು ಎಲ್ಲಾ ಸಮಯದಲ್ಲೂ ರಕ್ಷಣೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ನಾವು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು" ಎಂದು ಮೊಹ್ಸಿನ್ ಒತ್ತಿ ಹೇಳಿದರು.

ರಾಜ್ಯವ್ಯಾಪಿ ಸುರಕ್ಷತಾ ಉಪಕ್ರಮದ ಭಾಗವಾಗಿ ಸರ್ಕಾರ, ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಬಲವಾದ ಭದ್ರತಾ ಕ್ರಮಗಳು, ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಕಡ್ಡಾಯ ಸುರಕ್ಷತಾ ಪ್ರೋಟೋಕಾಲ್‌ಗಳು, ತುರ್ತು ಪ್ರತಿಕ್ರಿಯೆ ವ್ಯವಸ್ಥೆಗಳು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸಹಾಯವಾಣಿಗಳು ಹಾಗೂ ಯಾವುದೇ ರೀತಿಯ ಕಿರುಕುಳ ಅಥವಾ ಹಿಂಸಾಚಾರದ ವಿರುದ್ಧ ಕಠಿಣ ಕ್ರಮದ ಮೇಲೆ ಹೆಚ್ಚು ಕೇಂದ್ರೀಕರಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com