ಹಂಪಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಕಳವಳ: ಹೋಂಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿದ ಜಿಲ್ಲಾಡಳಿತ

ಜನತಾ ಪ್ಲಾಟ್‌ನಲ್ಲಿ 61, ಕಡ್ಡಿರಾಂಪುರದಲ್ಲಿ 23 ಮತ್ತು ನ್ಯೂ ಹಂಪಿಯಲ್ಲಿ 33 ಹೋಂಸ್ಟೇಗಳಿವೆ. ಈ ಎಲ್ಲಾ ಹೋಂಸ್ಟೇಗಳು ಯಾವುದೇ ಅನುಮತಿ ಪಡೆದಿಲ್ಲ ಎಂದು ತಳಕೆರೆ ಹೇಳಿದರು.
File image
ಹಂಪಿ ( ಸಂಗ್ರಹ ಚಿತ್ರ)
Updated on

ಹೊಸಪೇಟೆ: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ನಡೆದ ಪ್ರಕರಣದ ನಂತರ ಜಿಲ್ಲಾಡಳಿತ ಎಚ್ಚೆತ್ತಿದೆ. ಹೋಂಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ವಿಜಯನಗರ ಜಿಲ್ಲೆಯ ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 117 ಕ್ಕೂ ಹೆಚ್ಚು ನೋಂದಣಿಯಾಗದ ಹೋಂಸ್ಟೇಗಳಿವೆ. ಇದು ಪ್ರವಾಸಿಗರ ಸುರಕ್ಷತೆಯ ಬಗ್ಗೆ, ವಿಶೇಷವಾಗಿ ವಿದೇಶಿಯರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ಕರ್ನಾಟಕ ಪ್ರವಾಸೋದ್ಯಮ ಕಾಯ್ದೆಯ ಪ್ರಕಾರ, ಹೋಂಸ್ಟೇಗಳಿಗೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮತ್ತು ಅನುಮೋದನೆ ಕಡ್ಡಾಯವಾಗಿದೆ. ಆದಾಗ್ಯೂ, ಅನೇಕ ಹೋಂಸ್ಟೇ ಮಾಲೀಕರು ನೋಂದಾಯಿಸಿಕೊಂಡಿಲ್ಲ. ಕಾನೂನು ಸೌಲಭ್ಯ ಪಡೆಯಲು ಹೋಮ್ ಸ್ಟೇಗಳನ್ನು ನೋಂದಾಯಿಸಿಕೊಳ್ಳಲು ಜಿಲ್ಲಾಡಳಿತ ಅವಕಾಶ ಒದಗಿಸಿದೆ.

ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚಿನ ಅಹಿತಕರ ಬೆಳವಣಿಗೆಗಳು ಸ್ಥಳೀಯ ಅಧಿಕಾರಿಗಳಿಗೆ ಕಳವಳಕ್ಕೆ ಕಾರಣವಾಗಿವೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ, ಸ್ಥಳೀಯ ಅಧಿಕಾರಿಗಳನ್ನು ದೂಷಿಸಲಾಗುತ್ತದೆ. ಇದು ಅವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹಂಪಿ ಮತ್ತು ಸುತ್ತಮುತ್ತಲಿನ ಅನೇಕ ಹೋಂಸ್ಟೇಗಳು ಯಾವುದೇ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ಬಿಎಲ್ ಹೇಳಿದರು.

ಸ್ಥಳೀಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ ವಿಜಯನಗರ ಎಸ್ಪಿ ಶ್ರೀಹರಿ ಬಾಬು ಬಿಎಲ್, ಹೋಂಸ್ಟೇ ಮಾಲೀಕರು ಎಎಸ್ಐ, ಯುನೆಸ್ಕೋ ಮತ್ತು ಸಂಬಂಧಪಟ್ಟ ಇತರ ಅಧಿಕಾರಿಗಳ ಮಾರ್ಗಸೂಚಿಗಳನ್ನು ಪಾಲಿಸಿದರೆ ಅವರಿಗೆ ಎಲ್ಲಾ ರೀತಿಯ ಬೆಂಬಲ ನೀಡಲು ಪೊಲೀಸ್ ಇಲಾಖೆ ಸಿದ್ಧವಾಗಿದೆ ಎಂದು ಹೇಳಿದರು.

File image
ಪ್ರವಾಸಿಗರ ಸುರಕ್ಷತೆಯ ಖಾತ್ರಿ: ಹೋಂಸ್ಟೇ, ರೆಸಾರ್ಟ್ ಮಾಲೀಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ!

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಪ್ರಭುಲಿಂಗ ತಳಕೆರೆ ಮಾತನಾಡಿ, ಪ್ರವಾಸಿ ತಾಣಗಳಲ್ಲಿನ ಹೋಂಸ್ಟೇಗಳ ಮಾಲೀಕರು ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಹಬ್ಬ ಮತ್ತು ನಿಯಂತ್ರಣ) ಕಾಯ್ದೆ, 2015 ರ ಸೆಕ್ಷನ್ 8 ರ ಅಡಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಜನತಾ ಪ್ಲಾಟ್‌ನಲ್ಲಿ 61, ಕಡ್ಡಿರಾಂಪುರದಲ್ಲಿ 23 ಮತ್ತು ನ್ಯೂ ಹಂಪಿಯಲ್ಲಿ 33 ಹೋಂಸ್ಟೇಗಳಿವೆ. ಈ ಎಲ್ಲಾ ಹೋಂಸ್ಟೇಗಳು ಯಾವುದೇ ಅನುಮತಿ ಪಡೆದಿಲ್ಲ ಎಂದು ತಳಕೆರೆ ಹೇಳಿದರು. "ನಾವು ಹಲವಾರು ಹೋಂಸ್ಟೇಗಳ ಮಾಲೀಕರಿಗೆ ನೋಟಿಸ್ ನೀಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ..

ಹಂಪಿಯಲ್ಲಿ ಪ್ರವಾಸಿ ಮಾರ್ಗದರ್ಶಿಯಾಗಿ ಕೆಲಸ ಮಾಡುವ ವಿರೂಪಾಕ್ಷಿ ವಿ, ಹೋಂಸ್ಟೇಗಳನ್ನು ನೋಂದಾಯಿಸಲು ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿ ನೀಡಿರುವ ಅವಕಾಶದ ನಿರ್ಧಾರವನ್ನು ಸ್ವಾಗತಿಸಿದರು.

ನೋಂದಣಿ ಮಾಡುವುದರಿಂದ ಹೋಂಸ್ಟೇ ಮಾಲೀಕರಿಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಮಾತ್ರವಲ್ಲದೆ, ಪೊಲೀಸರು ಮತ್ತು ಇತರ ಏಜೆನ್ಸಿಗಳು ಸುರಕ್ಷಿತ ಪ್ರವಾಸೋದ್ಯಮವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಹಂಪಿ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಹಿನ್ನೆಲೆಯಲ್ಲಿ, ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಗೃಹ ಇಲಾಖೆ ರಾಜ್ಯಾದ್ಯಂತ ಪೊಲೀಸ್ ಆಯುಕ್ತರು ಮತ್ತು ಎಸ್‌ಪಿಗಳಿಗೆ ಸುತ್ತೋಲೆ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com