ವಿಧಾನ ಪರಿಷತ್: ಗ್ಯಾರಂಟಿ ಸಮಿತಿ ರದ್ದುಗೊಳಿಸುವಂತೆ ಬಿಜೆಪಿ, ಜೆಡಿಎಸ್ ಆಗ್ರಹ

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ ರೂ.ಗಳನ್ನು ನೀಡಿರುವುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಸದಸ್ಯ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಕರ್ನಾಟಕ ವಿಧಾನ ಪರಿಷತ್
ಕರ್ನಾಟಕ ವಿಧಾನ ಪರಿಷತ್
Updated on

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ ರೂ.ಗಳನ್ನು ನೀಡಿರುವುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಸದಸ್ಯ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

"ನೀವು ಏಜೆನ್ಸಿಗಳಿಗೆ ಹಣ ನೀಡಿದ್ದರೆ, ಅನುಷ್ಠಾನ ಸಮಿತಿ ಏಕೆ? ಕಾರ್ಯಕರ್ತರಿಗೆ ಸಂಬಳ ನೀಡಿ ಜನರಿಂದ ಮಾಹಿತಿ ಪಡೆಯುವುದರ ಅರ್ಥವೇನು?" ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

ಈ ವೇಳೆ ನಾರಾಯಣಸ್ವಾಮಿ ಅವರಿಗೆ ಸಾಥ್ ನೀಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಎಂ2ಎಂ ಸಂಸ್ಥೆಗೆ ಒಂದು ಕೋಟಿ ರೂ. ಮತ್ತು ಇನ್ನೊಂದು ಸಂಸ್ಥೆಗೆ 9.25 ಕೋಟಿ ರೂ. ನೀಡಲಾಗಿದೆ ಎಂದು ಗಮನಸೆಳೆದರು. ಇದನ್ನು ಉತ್ತರದಲ್ಲಿ ಉಲ್ಲೇಖಿಸಲಾಗಿಲ್ಲ. ಇದನ್ನು ಏಕೆ ಮರೆಮಾಚಲಾಗುತ್ತಿದೆ? ಎಂದು ಪ್ರಶ್ನಿಸಿದರು.

ಕರ್ನಾಟಕ ವಿಧಾನ ಪರಿಷತ್
ಗ್ಯಾರಂಟಿ ಜಾರಿ ಮೇಲ್ವಿಚಾರಣಾ ಸಮಿತಿಗಳ ರದ್ದುಗೊಳಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇದಕ್ಕು ಮೊದಲು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, ಗ್ಯಾರಂಟಿಗಳಿಂದ ರಾಜ್ಯಕ್ಕೆ ನಷ್ಟವೆಂದು ಬಿಜೆಪಿ ಆರೋಪಿಸಿತ್ತು. ಹಣ ಸರಿಯಾಗಿ ಜನರಿಗೆ ತಲುಪುತಿದೆಯಾ ಎಂದು ತಿಳಿಯುವುದಕ್ಕೆ ಕೆಲ ಏಜೆನ್ಸಿಗಳಿಗೆ ವಹಿಸಿದ್ದೆವು. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಮೀಸಲಿರಿಸಲಾಗಿದೆ. ಮೌಲ್ಯಮಾಪನ ನಡೆಸಲು ಶೇ.1ರಷ್ಟು ಖರ್ಚು ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದರು.

ಈ ಮಧ್ಯೆ, ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರು ಮಧ್ಯಪ್ರವೇಶಿಸಿ ಶುಕ್ರವಾರ ಇದರ ಬಗ್ಗೆ ಚರ್ಚೆಗೆ ಅರ್ಧ ಗಂಟೆ ಸಮಯ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com