BDA ಅಕ್ರಮಗಳ ತನಿಖೆಗೆ ಸಮಿತಿ ರಚನೆ

ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.
BDA
ಬಿಡಿಎTNIE
Updated on

ಬೆಂಗಳೂರು: ಬಿಟಿಎಂ ಲೇಔಟ್ ಮತ್ತು ಜಯನಗರದಲ್ಲಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳ ಮಾರಾಟದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ರಾಜ್ಯ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ.

ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯಲ್ಲಿ ನಗರಾಭಿವೃದ್ಧಿ ಅಧೀನ ಕಾರ್ಯದರ್ಶಿ ರಾಜೇಶ್ ಸುಲಿಕೆರೆ ಮತ್ತು ಪಟ್ಟಣ ಯೋಜನಾ ಇಲಾಖೆಯ ಜಂಟಿ ನಿರ್ದೇಶಕ ಎಸ್ ಗೋಪಾಲಕೃಷ್ಣ ಅವರು ಸೇರಿದ್ದಾರೆ.

ಕೆಂಪೇಗೌಡ ಲೇಔಟ್ ರಚನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಪರಿಹಾರ ಕುರಿತು ಪರಿಶೀಲನೆ ನಡೆಸುವಂತೆ ಸಮಿತಿಗೆ ಸೂಚಿಸಲಾಗಿದೆ.

BDA
ಬೆಂಗಳೂರು: ಬಿಡಿಎ ಫ್ಲ್ಯಾಟ್‌ ಮಾರಾಟ ಮೇಳ; 1 ಸಾವಿರ ಮನೆಗಳ ಮಾರಾಟ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com