ನುಡಿದಂತೆ ನಡೆದ ಯೋಗಿ ಸರ್ಕಾರ: ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ಸಂತ್ರಸ್ತರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ಹಣ ಜಮೆ

ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ.
Kumbhmela ( File image)
ಕುಂಭಮೇಳ (ಸಂಗ್ರಹ ಚಿತ್ರ)
Updated on

ಬೆಳಗಾವಿ: ಜನವರಿ 29 ರಂದು ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪ್ರಯಾಗರಾಜ್ ಜಿಲ್ಲಾಧಿಕಾರಿ ರವಿ ಮಂಜರ್ ಅವರೊಂದಿಗೆ ಚರ್ಚಿಸಿದ ನಂತರ ಪರಿಹಾರದ ಮೊತ್ತವನ್ನು ನೇರವಾಗಿ ಮೃತರ ಕುಟುಂಬಗಳಾದ ಜ್ಯೋತಿ ಹತ್ತರವಾಡ, ಮೇಘಾ ಹತ್ತರವಾಡ, ಮಹಾದೇವಿ ಬಾವನೂರ ಮತ್ತು ಅರುಣ್ ಕೋಪರ್ಡೆ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಲೆಕ್ಕಿಗರ ಮೂಲಕ ಪರಿಶೀಲನೆ ಪ್ರಕ್ರಿಯೆ ನಡೆಸಲಾಗಿದೆ ಎಂದು ತಿಳಿಸಿದರು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜ.29 ರಂದು ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು.

ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದೆ.

Kumbhmela ( File image)
ಕುಂಭಮೇಳ ಕಾಲ್ತುಳಿತ ದುರಂತ: ನಾಲ್ವರ ಪಾರ್ಥಿವ ಶರೀರ ಬೆಳಗಾವಿಗೆ ಆಗಮನ, ಕುಟುಂಬಸ್ಥರ ಆಕ್ರಂದನ

ಈ ಕುರಿತು ಸ್ವತಃ ಡಿಸಿ ಮಾಹಿತಿ ಹಂಚಿಕೊಂಡಿದ್ದು, ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಪರಿಹಾರ ಮೊತ್ತ ಜಮೆಯಾಗಿದೆ. ನಾಲ್ವರಿಗೆ ತಲಾ 25 ಲಕ್ಷ ರೂ.ಯಂತೆ 1 ಕೋಟಿ ರೂ. ಪರಿಹಾರ ವಿತರಣೆಯಾಗಿದ್ದು, ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡುವಂತೆ ಜಿಲ್ಲಾಡಳಿತದಿಂದ ವರದಿ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿಗಳು ಮತ್ತು ಮರಣ ಪ್ರಮಾಣಪತ್ರಗಳನ್ನು ಕಳುಹಿಸಲಾಗುವುದು ಎಂದು ಪ್ರಯಾಗ್‌ರಾಜ್ ಆಡಳಿತವು ಭರವಸೆ ನೀಡಿದೆ ಎಂದು ಅವರು ಹೇಳಿದರು.

ಮಹಾಕುಂಭದ ಪ್ರಮುಖ ಸ್ನಾನದ ದಿನವಾದ ಮೌನಿ ಅಮಾವಾಸ್ಯೆಯಂದು ಸಂಗಮ ಘಾಟ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಭಕ್ತರು ಸಾವನ್ನಪ್ಪಿದರು ಮತ್ತು 60 ಮಂದಿ ಗಾಯಗೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com