ಈಗ ಇರೋದು ಸಿದ್ದರಾಮಯ್ಯ ಸರ್ಕಾರ, ನಿಮ್ಮಪ್ಪಂದಲ್ಲ: ವೇದಿಕೆ ಮೇಲೆ MP ಪಿಸಿ ಮೋಹನ್​, MLA ಪ್ರದೀಪ್​ ಈಶ್ವರ್ ವಾಗ್ವಾದ; ವಿಡಿಯೋ!

ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ವೇಳೆ ಶಾಸಕ ಪ್ರದೀಪ್‌ ಈಶ್ವರ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
PC Mohan-Pradeep Eshwar
ಪಿಸಿ ಮೋಹನ್-ಪ್ರದೀಪ್ ಈಶ್ವರ್
Updated on

ಬೆಂಗಳೂರು: ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ವೇಳೆ ಶಾಸಕ ಪ್ರದೀಪ್‌ ಈಶ್ವರ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಕ್ರೋಶಭರಿತರಾದ ಪ್ರದೀಪ್‌ ಈಶ್ವರ್ ಬಿಜೆಪಿ ಕಾರ್ಯಕ್ರರ್ತರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವೇದಿಕೆ ಮೇಲೆ ಪ್ರದೀಪ್‌ ಈಶ್ವರ್‌ ಮಕ್ಕಳ ಶಿಕ್ಷಣ ಕುರಿತಂತೆ ಮಾತನಾಡುತ್ತಿದ್ದರು. ಇದಕ್ಕೆ ಕೆಲ ಬಿಜೆಪಿ ಕಾರ್ಯಕರ್ತರು ಆಕ್ಷೇಪ ಎತ್ತಿದರು. ಇದರಿಂದ ಆಕ್ರೋಶಗೊಂಡ ಪ್ರದೀಪ್ ಈಶ್ವರ್, ಸಮುದಾಯ ಗುಣಗಾನ ಮಾಡೋಕೆ ಇದೇನು ಬಿಜೆಪಿ ಕಾರ್ಯಕ್ರಮ ಅಂದುಕೊಂಡಿದ್ದೀರಾ? ಈ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದೋದು. ಬಿಜೆಪಿ ಗುಣಗಾನ ಮಾಡೋದು ನಿಲ್ಲಬೇಕು. ಬಾಯಿ ಮುಚ್ಕೊಂಡು ಕೂತ್ಕೊಬೇಕು. ರಾಜ್ಯದಲ್ಲಿ ಸಿದ್ದರಾಮಯ್ಯನ ಸರ್ಕಾರ ಇರೋದು, ನಿಮ್ಮಪ್ಪನ ಸರ್ಕಾರ ಅಲ್ಲ ಎಂದು ಏಕವಚನದಲ್ಲೇ ಮಾತನಾಡಿದರು.

PC Mohan-Pradeep Eshwar
ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ಎತ್ತಂಗಡಿ!

ಇದು ಸಿದ್ದರಾಮಯ್ಯನ ಕಾರ್ಯಕ್ರಮ, ನಿಮ್ಮಪ್ಪನ ಕಾರ್ಯಕ್ರಮ ಅಲ್ಲ ಗೆಟ್‌ ಲಾಸ್ಟ್‌ ಅಂತ ಕಿಡಿಕಾರಿದರು. ನಮಗೂ ನಮ್ಮ ಪಾರ್ಟಿ ಸಿದ್ಧಾಂತಗಳಿರುತ್ತೆ. ನೀವು ನಿಮ್ಮ ಪಕ್ಷವನ್ನ ಗುಣಗಾನ ಮಾಡಿದ್ರೆ, ನಾವು ನಮ್ಮ ಪಕ್ಷವನ್ನ ಗುಣಗಾನ ಮಾಡಬೇಕಾಗುತ್ತೆ ಅಂತ ವಾರ್ನಿಂಗ್‌ ಕೊಟ್ಟರು. ಈ ವೇಳೆ ವೇದಿಕೆ ಮೇಲಿದ್ದ ಬಿಜೆಪಿ ಸಂಸದ ಪಿ.ಸಿ ಮೋಹನ್‌.. ಪ್ರದೀಪ್‌ ಈಶ್ವರ್‌ ನಿಮಗೆ ಉತ್ಸಾಹ ಇದೆ. ಆದರೆ ನೀವು ಇಲ್ಲಿ ಕೂತ್ಕೊಂಡು ಇದು ಸಿದ್ದರಾಮಯ್ಯನ ಪ್ರೋಗ್ರಾಂ ಅಂದ್ರೆ, ನಾನು ಬಿಜೆಪಿ ಸಂಸದ ಇಲ್ಲಿ ಇರಬೇಕೋ ಹೋಗಬೇಕೋ‌ ಹೇಳಿ? ಅಂತ ಗುಡುಗಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಗಣ್ಯರು ಹಾಗೂ ಕಾರ್ಯಕ್ರಮ ಆಯೋಜಕರು ಇಬ್ಬರನ್ನು ಮನವೊಲಿಸುವ ಪ್ರಯತ್ನ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com