ಸರ್ಕಾರಿ ಶಾಲೆಯ ಬಾಲಕಿಯರ ಶೌಚಾಲಯಕ್ಕೆ ಕಲ್ಲು ತೂರಾಟ, ವಿದ್ಯಾರ್ಥಿ ಮೇಲೆ ಹಲ್ಲೆ: ಐವರ ಬಂಧನ

ಆರೋಪಿಗಳನ್ನು ಮೆಹಬೂಬ್ ಷರೀಫ್, ಶಂಶುದ್ದೀನ್, ಇರ್ಫಾನ್, ಮುಬಾರಕ್, ಮುದ್ದಾಸಿರ್, ಯಾಸಿನ್ ಮತ್ತು ತಾಜಿಮ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹುಳಿಯಾರ್ ನಗರದ ನಿವಾಸಿಗಳು.
Representational image
ಸಾಂದರ್ಭಿಕ ಚಿತ್ರ
Updated on

ತುಮಕೂರು: ಸರ್ಕಾರಿ ಶಾಲೆಯ ಬಾಲಕಿಯರ ಶೌಚಾಲಯಕ್ಕೆ ಕಲ್ಲು ತೂರಾಟ ನಡೆಸಿದ ಮತ್ತು ಆರೋಪಿಗಳ ಕೃತ್ಯವನ್ನು ಪ್ರಶ್ನಿಸಿದ ಶಾಲಾ ಬಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಐವರನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಮೆಹಬೂಬ್ ಷರೀಫ್, ಶಂಶುದ್ದೀನ್, ಇರ್ಫಾನ್, ಮುಬಾರಕ್, ಮುದ್ದಾಸಿರ್, ಯಾಸಿನ್ ಮತ್ತು ತಾಜಿಮ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹುಳಿಯಾರ್ ನಗರದ ನಿವಾಸಿಗಳು. ಇನ್ನಿಬ್ಬರು ಶಂಕಿತರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಶುಕ್ರವಾರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರ್ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಬಾಲಕಿಯರ ಶೌಚಾಲಯದ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸುತ್ತಿರುವುದನ್ನು ಗಮನಿಸಿದ ಶಾಲಾ ವಿದ್ಯಾರ್ಥಿ ಯಶವಂತ್, ಅವರನ್ನು ತರಾಟೆಗೆ ತೆಗೆದುಕೊಂಡು ಕಲ್ಲುತೂರಾಟವನ್ನು ನಿಲ್ಲಿಸುವಂತೆ ಎಚ್ಚರಿಸಿದ್ದಾನೆ. ಇದರಿಂದ ಕೋಪಗೊಂಡ ಗುಂಪು ಆತನನ್ನು ಅಟ್ಟಿಸಿಕೊಂಡು ಹೋಗಿ ಕೋಲುಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದೆ.

Representational image
ಕೋಲಾರ: ಶಾಲೆ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಯ ಮತ್ತೊಂದು ವಿಡಿಯೋ ವೈರಲ್!

ಮುಖ್ಯ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕನನ್ನು ದಾಳಿಕೋರರಿಂದ ರಕ್ಷಿಸಿದ್ದಾರೆ. ಶಿಕ್ಷಕರು ಮತ್ತು ಇತರ ವಿದ್ಯಾರ್ಥಿಗಳು ಒಟ್ಟುಗೂಡುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿದ್ಯಾರ್ಥಿಯ ಬೆನ್ನು ಮತ್ತು ತಲೆಗೆ ಗಾಯಗಳಾಗಿದ್ದು, ಚಿಕ್ಕನಾಯಕನಹಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿ ಮೇಲಿನ ಹಲ್ಲೆ ಮತ್ತು ಬಾಲಕಿಯರ ಶೌಚಾಲಯದ ಮೇಲೆ ಕಲ್ಲು ತೂರಾಟ ನಡೆಸಿದ ಬಗ್ಗೆ ಶಾಲಾ ಆಡಳಿತ ಮಂಡಳಿ ಹುಳಿಯಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

'ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ದುಷ್ಕರ್ಮಿಗಳಿಗೆ ಕಾನೂನಿನ ಭಯವಿಲ್ಲ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವನ್ನು ಓಲೈಕೆ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಪದೇ ಪದೆ ಆರೋಪಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com