ಕಾವೇರಿ ನದಿಯಲ್ಲಿ ದುರಂತ: ಮೊಮ್ಮಕ್ಕಳನ್ನು ರಕ್ಷಿಸಲು ಹೋಗಿ ತಾತ ಸೇರಿ ಮೂವರು ಜಲಸಮಾಧಿ

ಕಾವೇರಿ ನದಿಯಲ್ಲಿ ಘೋರ ದುರಂತವೊಂದು ನಡೆದಿದ್ದು ಇಬ್ಬರು ಮೊಮ್ಮಕ್ಕಳು ಮತ್ತು ತಾತ ಜಲಸಮಾಧಿಯಾಗಿದ್ದಾರೆ. ಮೈಸೂರಿನ ಜಿಲ್ಲೆಯ ಟಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಕಾವೇರಿ ನದಿಯಲ್ಲಿ ಘೋರ ದುರಂತವೊಂದು ನಡೆದಿದ್ದು ಇಬ್ಬರು ಮೊಮ್ಮಕ್ಕಳು ಮತ್ತು ತಾತ ಜಲಸಮಾಧಿಯಾಗಿದ್ದಾರೆ. ಮೈಸೂರಿನ ಜಿಲ್ಲೆಯ ಟಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ. ಮೃತರನ್ನು ತಿರುಮಕೂಡಲಿನ ನಿವಾಸಿಗಳಾದ 70 ವರ್ಷದ ಚೌಡಯ್ಯ, 13 ವರ್ಷದ ಭರತ್ ಮತ್ತು 10 ವರ್ಷದ ಧನುಷ್ ಎಂದು ಗುರುತಿಸಲಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ಚೌಡಯ್ಯ ಇಳಿದಿದ್ದರು. ಆದರೆ ಇಬ್ಬರು ಮೊಮ್ಮಕ್ಕಳ ಜೊತೆಗೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಂಗ್ರಹ ಚಿತ್ರ
ಬೆಂಗಳೂರು: ವ್ಯಕ್ತಿಯೋರ್ವನನ್ನು ಮನೆಗೆ ಕರೆಸಿ ಸನ್ಮಾನ ಮಾಡಿ, ಹಿಗ್ಗಾಮುಗ್ಗ ಥಳಿಸಿ, ಅಶ್ಲೀಲ ಪದಗಳಿಂದ ನಿಂದನೆ; ವಿಡಿಯೋ ವೈರಲ್!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com