ಬೆಂಗಳೂರು: ವೃದ್ಧ ಅತ್ತೆಯ ಮೇಲೆ ಹಲ್ಲೆ; ವಿಕ್ಟೋರಿಯಾ ಆಸ್ಪತ್ರೆ ಡಾಕ್ಟರ್ ಗೆ ಶೋಕಾಸ್ ನೋಟಿಸ್!

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ವೈದ್ಯಕೀಯ ಅಧಿಕಾರಿ ಡಾ.ಪ್ರಿಯದರ್ಶಿನಿ ಅವರು ತಮ್ಮ ಮಕ್ಕಳೊಂದಿಗೆ ಸೇರಿ ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿದ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.
Doctor Priyadarshini
ಹಲ್ಲೆ ನಡೆಸಿದ ವೈದ್ಯೆ
Updated on

ಬೆಂಗಳೂರು: ಮಕ್ಕಳೊಂದಿಗೆ ಸೇರಿ ವೃದ್ಧ ಅತ್ತೆಯ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ವೈದ್ಯಕೀಯ ಅಧಿಕಾರಿ ಡಾ.ಪ್ರಿಯದರ್ಶಿನಿ ಅವರು ತಮ್ಮ ಮಕ್ಕಳೊಂದಿಗೆ ಸೇರಿ ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿದ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ. ಕಳೆದ ಹತ್ತು ವರ್ಷಗಳಿಂದ ಆಕೆ ಅವರಿಗೆ ಕಿರುಕುಳ ನೀಡುತ್ತಿರುವುದಾಗಿ ವರದಿಗಳು ತಿಳಿಸಿವೆ.

ಆಕೆ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ತನ್ನ ಅತ್ತೆಯ ಮನೆಗೆ ಹೋಗಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 14 ರಂದು ವಿಡಿಯೋ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದೆ. ವೈದ್ಯರ ಮಾವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ವೈದ್ಯೆಯನ್ನು ಬಂಧಿಸಿ ನಂತರ ಅದೇ ದಿನ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರ ನಿರ್ದೇಶನದ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಯ ಡಾ.ಪ್ರಿಯದರ್ಶಿನಿ ಅವರು ಘಟನೆಯ ಬಗ್ಗೆ ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಕೇಳಿದ್ದು, ತಪ್ಪಿದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮೊಹ್ಸಿನ್, ಇಂತಹ ವರ್ತನೆ ಇಲಾಖೆಗೆ ಮುಜುಗರ ತಂದಿದೆ ಎಂದು ಹೇಳಿದ್ದು, ಕೂಡಲೇ ಡಾ.ಪ್ರಿಯದರ್ಶಿನಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶಕಿ (ಡಿಎಂಇ) ಡಾ.ಸುಜಾತಾ ರಾಥೋಡ್ ಅವರಿಗೆ ಸೂಚಿಸಿದ್ದಾರೆ.

Doctor Priyadarshini
ಬೆಂಗಳೂರು: ವೃದ್ಧ ಅತ್ತೆ-ಮಾವನ ಮೇಲೆ ಪ್ರಸಿದ್ದ ಸರ್ಕಾರಿ ಆಸ್ಪತ್ರೆ ವೈದ್ಯೆ ಹಲ್ಲೆ; ವಿಡಿಯೋ ವೈರಲ್

ತಮ್ಮ ಆಸ್ತಿಯನ್ನು ಇತರರಿಗೆ ವರ್ಗಾಯಿಸಿದ ನಂತರ ವೃದ್ಧ ಪೋಷಕರನ್ನು ಆಸ್ಪತ್ರೆಗಳಲ್ಲಿ ಕೈಬಿಡುವ ಪ್ರಕರಣಗಳನ್ನು ಮೊಹ್ಸಿನ್ ಅವರು ಈ ಹಿಂದೆಯೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಗಮನಕ್ಕೆ ತಂದಿದ್ದರು. ಅಂತಹ ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕೆ ಅವರು ಶಿಫಾರಸುಗಳನ್ನು ಸಹ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com