ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಹೋಳಿ ಆಚರಣೆ ವೇಳೆ ನೇಪಾಳಿ ಗುಂಪುಗಳ ನಡುವೆ ಘರ್ಷಣೆ, ಮೂವರ ಬಂಧನ

ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು
Updated on

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್ ನಲ್ಲಿ ಹೋಳಿ ಆಚರಿಸುವಾಗ ನೇಪಾಳಿ ನಾಗರಿಕರ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಲಾಲ್‌ಬಾಗ್ ನಲ್ಲಿ ಶುಕ್ರವಾರ ಸಂಜೆ ಈ ಘರ್ಷಣೆ ನಡೆದಿದ್ದು, ಯುವಕರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಮರ್, ಉಮೇಶ್ ಮತ್ತು ರಮೇಶ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ ಓರ್ವ ಬೆಂಗಳೂರು ನಿವಾಸಿಯಾಗಿದ್ದರೆ, ಉಳಿದ ಇಬ್ಬರು ನೇಪಾಳ ಮೂಲದವರು ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳು
ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಹೋಳಿ ಆಚರಣೆ ವೇಳೆ ಘರ್ಷಣೆ: ಎರಡು ಗುಂಪುಗಳ ಮಧ್ಯೆ ಮಾರಾಮಾರಿ

ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಹಲವಾರು ಜನ ಕಳವಳ ವ್ಯಕ್ತಪಡಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ ನಂತರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಎರಡು ಗುಂಪುಗಳು ಪರಸ್ಪರ ಬಣ್ಣಗಳನ್ನು ಎರಚುವ ಮೂಲಕ ಹೋಳಿ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ನಡುವೆ ಗಲಾಟೆ ಪ್ರಾರಂಭವಾಯಿತು.

ಜಗಳಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎರಡು ಗುಂಪುಗಳ ಸದಸ್ಯರು ಕೋಲುಗಳು ಮತ್ತು ನೀರಿನ ಬಾಟಲಿಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com