ಅಧಿಕಾರಿಗಳಿಂದ ಶಾಸಕರಿಗೆ ಅವಮಾನ: ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸಿದ ಸ್ಪೀಕರ್ ಯು ಟಿ ಖಾದರ್

"ಇದು ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಬೇಕು. ನಾನು ಇದನ್ನು ಹಕ್ಕುಬಾಧ್ಯತಾ ಸಮಿತಿಗೆ ಉಲ್ಲೇಖಿಸುತ್ತಿದ್ದೇನೆ" ಎಂದು ಸ್ಪೀಕರ್ ತಿಳಿಸಿದರು.
ಸ್ಪೀಕರ್ ಯುಟಿ ಖಾದರ್
ಸ್ಪೀಕರ್ ಯುಟಿ ಖಾದರ್
Updated on

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಹಾಗೂ ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್ ಅವರಿಗೆ ಹಿರಿಯ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸುವುದಾಗಿ ವಿಧಾನಸಭೆ ಸ್ಪೀಕರ್ ಯು. ಟಿ ಖಾದರ್ ಅವರು ಮಂಗಳವಾರ ತಿಳಿಸಿದ್ದಾರೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ವಿರುದ್ಧ ರಾಜು ಕಾಗೆ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣವರ್ ವಿರುದ್ಧ ಮತ್ತಿಮೋಡ್ ಅವರು ಸಲ್ಲಿಸಿದ್ದ ಹಕ್ಕುಚ್ಯುತಿ ನೋಟಿಸ್ ಅನ್ನು ಉಲ್ಲೇಖಿಸಿದ ಖಾದರ್, ಶಾಸಕರ ಘನತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿ ಹೇಳಿದರು.

"ಕಾಗೆ ಮತ್ತು ಮತ್ತಿಮೋಡ್ ಅವರಿಗೆ ಏನಾಯಿತು ಎಂಬುದನ್ನು ಅವರು ವಿವರವಾಗಿ ವಿವರಿಸಿದ್ದಾರೆ ಮತ್ತು ಅದನ್ನು ಲಿಖಿತವಾಗಿಯೂ ನೀಡಿದ್ದಾರೆ. ಕಟಾರಿಯಾ ತಮ್ಮನ್ನು ಅವಮಾನಿಸಿದ್ದಾರೆ ಎಂದು ಕಾಗೆ ಆರೋಪಿಸಿದ್ದಾರೆ. ಅಲ್ಲದೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ತಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಮತ್ತಿಮೋಡ್ ಅವರು ಆರೋಪಿಸಿದ್ದಾರೆ. ಆದರೆ ಅಧಿಕಾರಿಗಳು ಶಾಸಕರಿಗೆ ಗೌರವ ನೀಡುವುದು ಅತ್ಯಂತ ಮುಖ್ಯ. ಕಾಮಗಾರಿಗಳಿಗೆ ಸಂಬಂಧಿಸಿದ ಸಂಗತಿಗಳನ್ನು ನಾನು ಪರಿಶೀಲಿಸುತ್ತಿಲ್ಲ. ಆದರೆ ಶಾಸಕರನ್ನು ಅಗೌರವಿಸುವ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ" ಎಂದು ಖಾದರ್ ಹೇಳಿದರು.

ಅಧಿಕಾರಿಗಳು ಸರ್ಕಾರದ ಸೇವಕರು. ಶಾಸಕರ ಅಪಮಾನವನ್ನು ಸಹಿಸುವುದಿಲ್ಲ. ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಶಾಸಕರು ಕರೆದಾಗ ಮಾತನಾಡಬೇಕಿತ್ತು. ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.

ಸ್ಪೀಕರ್ ಯುಟಿ ಖಾದರ್
ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸ್ಪೀಕರ್‌ ಯು ಟಿ ಖಾದರ್ ಗರಂ

ಅಧಿಕಾರಿಗಳು ಪರಸ್ಪರ ಗೌರವದ ಮಹತ್ವವನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಶಾಸಕರನ್ನು ಅವಮಾನಿಸುವುದು ಇಡೀ ಸದನವನ್ನು(ವಿಧಾನಸಭೆ) ಅವಮಾನಿಸಿದಂತೆ ಎಂದು ಖಾದರ್ ಒತ್ತಿ ಹೇಳಿದರು.

"ಇದು ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಬೇಕು. ನಾನು ಇದನ್ನು ಹಕ್ಕುಬಾಧ್ಯತಾ ಸಮಿತಿಗೆ ಉಲ್ಲೇಖಿಸುತ್ತಿದ್ದೇನೆ" ಎಂದು ಸ್ಪೀಕರ್ ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಸ್ಪೀಕರ್, ಸಾಮಾಜಿಕ ನ್ಯಾಯ ಅಧಿಕಾರಿಗಳಿಗೂ ಕೊಡಬೇಕು. ಎಲ್ಲರನ್ನೂ ಕರೆದು ನಿಮ್ಮ ನಿರ್ಣಯವನ್ನು ಪುನರ್ ಪರಿಶೀಲನೆ ಮಾಡಿ ಎಂದು ಮನವಿ ಮಾಡಿದರು.

ಕೆಲವು ಸಂಬಂಧಪಟ್ಟ ಸದಸ್ಯರು, ಸಚಿವರು, ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ದೂರು ನೀಡಿದ ಶಾಸಕರೊಂದಿಗೆ ತಮ್ಮ ಕೊಠಡಿಯಲ್ಲಿ ಸಭೆ ನಡೆಸುವಂತೆ ಅವರು ಸ್ಪೀಕರ್‌ಗೆ ಸಚಿವ ಎಚ್ ಕೆ ಪಾಟೀಲ್ ಸಲಹೆ ನೀಡಿದರು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಸಭಾಧ್ಯಕ್ಷರೇ ನಿರ್ಣಯವನ್ನು ಸ್ವಾಗತಿಸುತ್ತೇವೆ. ಎಲ್ಲರೂ ಗೌರವಕ್ಕಾಗಿಯೇ ಬದುಕುವುದು. ಹಕ್ಕು ಬಾಧ್ಯತಾ ಸಮಿತಿಯು ಅಧಿಕಾರಿಗಳಿಗೆ ಅವಕಾಶ, ನೋಟಿಸ್​ ಕೊಟ್ಟು ತೀರ್ಮಾನ ಮಾಡುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com