
ಬೆಂಗಳೂರು: ಆಹಾರ ಕಲಬೆರಕೆಯ ಆರೋಪ ಸಾಕಷ್ಟು ಕೇಳಿಬರುತ್ತಿರುವ ಹೊತ್ತಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಐಸ್ ಕ್ರೀಂ ಮತ್ತು ತಂಪು ಪಾನೀಯ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಬೇಸಿಗೆಯಲ್ಲಿ ಐಸ್ ಕ್ರೀಂ, ತಂಪು ಪಾನೀಯಗಳಿಗೆ ಮುಗಿಬೀಳುವ ಜನರು ಹೆಚ್ಚು. ಬೇಸಿಗೆ ಹಿನ್ನೆಲ್ ಅಲರ್ಟ್ ಆಗಿರುವ ಅಧಿಕಾರಿಗಳು ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಎಫ್ಎಸ್ಎಸ್ಎಐ ದಾಳಿ ಮಾಡಿದೆ. ನಗರದ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳು ಸ್ಯಾಂಪಲ್ ಕಲೆಕ್ಟ್ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ಹಿಟ್ಟು ಬೇಯಿಸುವುದು, ಹಸಿರು ಬಣ್ಣ ಹಾಕಿಟ್ಟ ಬಟಾಣಿ ಕಾಳುಗಳು ತಿನ್ನಲು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿತ್ತು.
ಖುಷಿಯಿಂದ ತಿನ್ನುವ ಪನ್ನೀರ್ ಕೂಡ ಡೇಂಜರ್!
ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆಗಳ ಆರೋಪ ಕೇಳಿಬರುತ್ತಿದ್ದು, ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ. ಆ ಮೂಲಕ ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಶಾಕ್ ನೀಡಿದೆ.
ಪನ್ನೀರ್ನಲ್ಲಿ ಅಸುರಕ್ಷಿತ ಅಂಶ ಪತ್ತೆ
ಕಲಬೆರಕೆ ಹಿನ್ನೆಲೆ ಕಳೆದ ಹಲವು ದಿನಗಳ ಹಿಂದೆ ಬೆಂಗಳೂರು ಸೇರಿ ಹಲವೆಡೆ ಆಹಾರ ಇಲಾಖೆ ಪನ್ನೀರ್ ಸ್ಯಾಂಪಲ್ ಸಂಗ್ರಹಿಸಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನ್ನೀರ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಅಸುರಕ್ಷಿತ ಅಂಶ ಪತ್ತೆಯಾಗಿದೆ.
Advertisement