BWSSBಗೆ ಪ್ರತಿಷ್ಠಿತ ಗರಿ: ಸುಸ್ಥಿರ ನಗರ ನೀರು ನಿರ್ವಹಣೆಗೆ ವಿಶ್ವ ಜಲ 2025 ಪ್ರಶಸ್ತಿ!

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ. BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಈ ಮನ್ನಣೆಯು ಬೆಂಗಳೂರಿಗೆ ಜಲ-ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ನಮ್ಮ ಪ್ರಯತ್ನಗಳನ್ನು ಮುಂದುವರಿಸಲು ನಮಗೆ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದರು.

ಯುನೆಸ್ಕೋ ಸಹಯೋಗದೊಂದಿಗೆ ನೀಡಲಾಗುವ ಈ ಪ್ರಶಸ್ತಿಗಳು, ಸಂಸ್ಥೆಗಳು, ಎನ್‌ಜಿಒಗಳು ಮತ್ತು ವ್ಯಕ್ತಿಗಳು ನೀರಿನ ಸಂಸ್ಕರಣೆ, ಮರುಬಳಕೆ ಮತ್ತು ಸಂರಕ್ಷಣೆಯಲ್ಲಿ ಮಾಡಿದ ಅಸಾಧಾರಣ ಪ್ರಯತ್ನಗಳನ್ನು ಗುರುತಿಸುತ್ತವೆ. BWSSB ಸುಸ್ಥಿರ ನಗರ ನೀರು ಸರಬರಾಜು ಮತ್ತು ನಿರ್ವಹಣೆಗೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಪ್ರಶಸ್ತಿಯನ್ನು ಪಡೆಯುತ್ತಿದೆ.

ಮನೋಹರ್ ಅವರ ಪ್ರಕಾರ, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು 23 ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸುವುದು, ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಅಂತರ್ಜಲ ಕಾರ್ಯಪಡೆಯನ್ನು ಸ್ಥಾಪಿಸಿರುವುದು ಮತ್ತು 3,000 ಮಳೆನೀರು ಕೊಯ್ಲು ಟ್ಯಾಂಕ್‌ಗಳನ್ನು ನಿರ್ಮಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ BWSSB ಗೆ ಪ್ರಶಸ್ತಿ ಲಭಿಸಿದೆ.

ಸಂಗ್ರಹ ಚಿತ್ರ
ಏಪ್ರಿಲ್ ವೇಳೆಗೆ 411 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ...!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com