ಉಡುಪಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ; ಯುವಕನ ವಿರುದ್ಧ ಕೇಸ್ ದಾಖಲು, ಲವ್ ಜಿಹಾದ್ ಆರೋಪ

ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಾಡ್ವಿನ್ ದೇವದಾಸ್, ತಮ್ಮ ಮಗಳು ಲವ್ ಜಿಹಾದ್‌ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿದರು.
Casual Images
ಸಾಂದರ್ಭಿಕ ಚಿತ್ರ
Updated on

ಉಡುಪಿ: 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿದ ಆರೋಪದ ಮೇಲೆ ಆಕೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಉಡುಪಿಯಲ್ಲಿ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೂಡುಬಿದಿರೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ತನ್ನ ಮಗಳು ಉಡುಪಿಯ ಅಕ್ರಮ್ ಮೊಹಮ್ಮದ್ ಎಂಬಾತ ಕುಕ್ಕಿಕಟ್ಟೆ ಜಂಕ್ಷನ್‌ನಲ್ಲಿ ಕಾಲೇಜು ಬಸ್‌ನಿಂದ ಇಳಿದು ತನ್ನ ಚಿಕ್ಕಮ್ಮನ ಮನೆಗೆ ನಡೆದು ಹೋಗುತ್ತಿದ್ದಾಗ ಅಕ್ರಮ್ ಮೊಹಮ್ಮದ್ ಎಂಬ ವ್ಯಕ್ತಿ ತನ್ನ ಸ್ಕೂಟರ್ ನಲ್ಲಿ ಆಕೆಯನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ (53) ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಮಾರ್ಚ್ 20 ರಂದು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯನ್ನು ಕಂಡ ಬಸ್ ಚಾಲಕ ದೇವದಾಸ್ ಗೆ ವಿಷಯ ತಿಳಿಸಿದ್ದಾರೆ. ತನ್ನ ಮಗಳು ಅಪ್ರಾಪ್ತಳಾಗಿದ್ದಾಗ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮೊಹಮ್ಮದ್ ವಿರುದ್ಧ ಈ ಹಿಂದೆ ದೂರು ದಾಖಲಿಸಿದ್ದೆ. ಇದರ ಸೇಡು ತೀರಿಸಿಕೊಳ್ಳಲು ಈಗ ಆಕೆಯನ್ನು ಅಪಹರಿಸಲಾಗಿದೆ ಎಂದು ದೇವದಾಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 140 (3) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಾಡ್ವಿನ್ ದೇವದಾಸ್, ತಮ್ಮ ಮಗಳು ಲವ್ ಜಿಹಾದ್‌ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿದರು. ಮೊಹಮ್ಮದ್ ತನ್ನ ಮಗಳೊಂದಿಗೆ ಕಳೆದ ಐದು ವರ್ಷಗಳಿಂದ ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕ ಹೊಂದಿದ್ದ. ಅವರ ಆತ್ಮೀಯತೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಕಿರುಕುಳ ನೀಡಿದ್ದಾನೆ. ಒಂದು ವಾರದ ಹಿಂದೆ ನೀಡಿದ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ವಯಸ್ಕರು ಒಪ್ಪಿ ಒಟ್ಟಿಗೆ ವಾಸಿಸುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ದಂಪತಿಗಳು ಸ್ವಯಂಪ್ರೇರಣೆಯಿಂದ ಒಟ್ಟಿಗೆ ವಾಸಿಸುವ ವೀಡಿಯೊವನ್ನು ಸಹ ತೋರಿಸಿದ್ದಾರೆ. ಆದಾಗ್ಯೂ, ನನ್ನ ಮಗಳ ಸುರಕ್ಷತೆಯ ಬಗ್ಗೆ ನನಗೆ ಕಾಳಜಿ ಇದೆ ಎಂದು ಅವರು ಹೇಳಿದರು.

ದೇವದಾಸ್ ಅವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ತಮ್ಮ ಮಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಉಡುಪಿ ನಗರ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಏಪ್ರಿಲ್ 4ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿತು.

Casual Images
ನೂರು ಜನ ಮುಸ್ಲಿಮರ ಮಧ್ಯೆ ಐವತ್ತು ಹಿಂದೂಗಳಿಗೆ ರಕ್ಷಣೆ ಇದೆಯೇ; ದೇವಾಲಯ ಕೆಡವಿ ಮಸೀದಿ ನಿರ್ಮಿಸಿದ 54 ಸ್ಥಳಗಳನ್ನು ಗುರುತಿಸಿದ್ದೇವೆ: ಯೋಗಿ ಆದಿತ್ಯನಾಥ್

ಇದೇ ವೇಳೆ ಮೊಹಮ್ಮದ್ ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 482 ರ ಅಡಿಯಲ್ಲಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್‌ನಿಂದ ಆಕ್ಷೇಪಣೆಗಾಗಿ ಮೊಹಮ್ಮದ್ ಅವರ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 2 ಕ್ಕೆ ಮುಂದೂಡಲಾಗಿದೆ ಎಂದು ನ್ಯಾಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com