ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ಪ್ರತಿಭಟನೆ

ಬ್ಯಾಂಕ್ ನಿವೃತ್ತರ ಸಂಯುಕ್ತ ವೇದಿಕೆಯು" ದೇಶದ ಸುಮಾರು ಏಳು ಬ್ಯಾಂಕ್ ನಿವೃತ್ತರ ಸಂಘಟನೆಗಳ ಒಂದು ರಾಷ್ಟ್ರೀಯ ಬೃಹತ್ ಸಂಘಟನೆಯಾಗಿದ್ದು, ವಿವಿಧ ನಿವೃತ್ತರ ಸಂಘಟನೆಗಳು ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾದರು.
protest
ಪ್ರತಿಭಟನೆ ಚಿತ್ರ
Updated on

ಬೆಂಗಳೂರು: ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿತು.

ಬ್ಯಾಂಕ್ ನಿವೃತ್ತರ ಸಂಯುಕ್ತ ವೇದಿಕೆಯು" ದೇಶದ ಸುಮಾರು ಏಳು ಬ್ಯಾಂಕ್ ನಿವೃತ್ತರ ಸಂಘಟನೆಗಳ ಒಂದು ರಾಷ್ಟ್ರೀಯ ಬೃಹತ್ ಸಂಘಟನೆಯಾಗಿದ್ದು,ವಿವಿಧ ನಿವೃತ್ತರ ಸಂಘಟನೆಗಳು ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾದರು.

"ಸಂಯುಕ್ತ ವೇದಿಕೆ"ಯ ಸಂಚಾಲಕರಾದ ಎಸ್.ಸಿ ಜೈನ್ ಮಾತನಾಡಿ, 1995 ರಿಂದ ಬಾಕಿ ಇರುವ ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆ, ವಿಶೇಷ ಭತ್ಯೆಗಳ ಮೇಲೆ ಪಿಂಚಣಿ ನೀಡುವ, ಖಾಸಗಿ ಬ್ಯಾಂಕ್ ನಿವೃತ್ತರಿಗೂ ಎಕ್ಸ್ ಗ್ರೇಶಿಯಾ ಕೊಡುವ, ಅರೋಗ್ಯ ವಿಮೆಯ ಸುಧಾರಣೆ ಮತ್ತು ಅರೋಗ್ಯ ವಿಮೆಯ ಮೇಲಿನ ಜಿ. ಎಸ್. ಟಿಯಿಂದ ಸಂಪೂರ್ಣ ವಿನಾಯತಿ ನೀಡುವ, ವಾಣಿಜ್ಯ ಬ್ಯಾಂಕುಗಳ ಪಿಂಚಣಿದಾರರಿಗೆ ಆಗುತ್ತಿರುವ ತಾರತಮ್ಯ ತಪ್ಪಿಸುವ ಜೊತೆಗೆ ಬ್ಯಾಂಕ್ ಉದ್ಯೋಗಕ್ಕೆ ರಾಜೀನಾಮೆ ನೀಡಿದವರಿಗೂ ಆದಷ್ಟು ಬೇಗ ಪಿಂಚಣಿ ನೀಡುವಲ್ಲಿ ಆಗುತ್ತಿರುವ ತೊಂದರೆಯನ್ನು ಬಗೆಹರಿಸಬೇಕು ಎಂದರು.

protest
ಬಜೆಟ್‌ನಲ್ಲಿ ತಮಿಳುನಾಡು ನಿರ್ಲಕ್ಷ್ಯ: ಕೇಂದ್ರದ ವಿರುದ್ಧ ಡಿಎಂಕೆ ಪ್ರತಿಭಟನೆ

ಒಕ್ಕೂಟದ ಜಂಟಿ ಪ್ರಧಾನ ಕಾರ್ಯದರ್ಶಿ ಕೆ. ವಿಶ್ವನಾಥ ನಾಯ್ಕ್ ಮಾತನಾಡಿ, ಬ್ಯಾಂಕ್ ನಿವೃತ್ತರ ಬೇಡಿಕೆಗಳ ಬಗ್ಗೆ ಚರ್ಚಿಸಲು ನೇರವಾಗಿ ಬ್ಯಾಂಕ್ ನಿವೃತ್ತರ ಸಂಘಟನೆಗಳ ನಾಯಕರನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾಮನ್ ಕರೆದು ಮಾತನಾಡಬೇಕು. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com