
ಬೆಂಗಳೂರು: ಇಲ್ಲಿನ ವಿಲ್ಸನ್ ಗಾರ್ಡನ್ ಪ್ರದೇಶದಲ್ಲಿ ವೇಗವಾಗಿ ಬಂದ ಆಂಬ್ಯುಲೆನ್ಸ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 49 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನನ್ನು ತಳ್ಳುಗಾಡಿ ವ್ಯಾಪಾರಿ ರಮೇಶ್ ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ 8.30ರ ಸುಮಾರಿಗೆ ವಿಲ್ಸನ್ ಗಾರ್ಡನ್ ಪ್ರದೇಶದ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಸ್ ರಸ್ತೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಸಂಜೀವನಿ ಆಂಬ್ಯುಲೆನ್ಸ್ ಎರಡು ತಳ್ಳುಗಾಡಿಗಳು, ಒಂದು ಆಟೋರಿಕ್ಷಾ, ಒಂದು ಸ್ಕೂಟರ್ಗೆ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿತ್ತು.
ಘಟನೆಯ ನಂತರ ಸ್ಥಳೀಯರು ಆಂಬ್ಯುಲೆನ್ಸ್ ಚಾಲಕ ಚಿರಂಜೀವ್ ಗೆ ತೀವ್ರವಾಗಿ ಥಳಿಸಿದ್ದು ನಂತರ ಪೊಲೀಸರಿಗೆ ಒಪ್ಪಿಸಿದರು. ಅಪಘಾತಕ್ಕೆ ಸಂಬಂಧಿಸಿದಂತೆ ಆಂಬ್ಯುಲೆನ್ಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement