ಖಾದರ್ ಗೆ ಮಾತ್ರವಲ್ಲ, ನನಗೂ ಬೆದರಿಕೆ ಕರೆ ಬಂದಿವೆ; ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ನನಗೂ ಬೆದರಿಕೆ ಕರೆಗಳು ಬರುತ್ತಿವೆ, ಏನು ಮಾಡಬೇಕು? ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಬೆದರಿಕೆ ಕರೆಗಳನ್ನು ಮಾಡುತ್ತಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೇಳಿದ್ದೇವೆ ಎಂದರು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಮಂಡ್ಯ: ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದ್ದು, ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಬೆದರಿಕೆ ಕರೆಗಳು ಬರುತ್ತಿವೆ, ಏನು ಮಾಡಬೇಕು? ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಬೆದರಿಕೆ ಕರೆಗಳನ್ನು ಮಾಡುತ್ತಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೇಳಿದ್ದೇವೆ ಎಂದರು.

ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಗೆ ಕಾರಣ ಇನ್ನೂ ತಿಳಿದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ," ಅವರು ರೌಡಿ ಶೀಟರ್ ಎಂದು ಹೇಳಲಾಗಿದೆ. ಅದನ್ನು ಪರಿಶೀಲಿಸಬೇಕಾಗಿದೆ. ಕೊಲೆಯ ನಂತರ, ನಾನು ನಿನ್ನೆ ಪೊಲೀಸರೊಂದಿಗೆ ಮಾತನಾಡಿದೆ, ಮತ್ತು ನಾವು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರನ್ನು ಮಂಗಳೂರಿಗೆ ಕಳುಹಿಸಿದ್ದೇವೆ. ಇದು ಪೂರ್ವನಿಯೋಜಿತವಾಗಿದೆಯೋ ಇಲ್ಲವೋ ಎಂಬುದು ಇನ್ನೂ ತಿಳಿದುಬಂದಿಲ್ಲ. ತನಿಖೆ ಪೂರ್ಣಗೊಂಡ ನಂತರ ಅದು ತಿಳಿಯುತ್ತದೆ ಎಂದರು.

CM Siddaramaiah
ಜಾತಿ-ಧರ್ಮಗಳ ನಡುವೆ ದ್ವೇಷ ಸೃಷ್ಟಿಸಿ, ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಯತ್ನ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಯಾವಾಗಲೂ ರಾಜಕೀಯ ಮಾಡಲು ಇಂತಹ ಘಟನೆಗಳನ್ನು ಹುಡುಕುತ್ತಲೇ ಇರುತ್ತದೆ ಎಂದರು, 26 ಜನರು ಸಾವನ್ನಪ್ಪಿದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಬಿಜೆಪಿಯನ್ನು ಪ್ರಶ್ನಿಸಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ಹೋಗಿದ್ದರೆ? ಎಂದು ಪ್ರಶ್ನಿಸಿದರು.

ಭಯೋತ್ಪಾದಕ ದಾಳಿ ನಡೆದ ಸ್ಥಳದಲ್ಲಿ ಒಬ್ಬನೇ ಒಬ್ಬ ಪೊಲೀಸ್ ಅಥವಾ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂಬ ಮಾಹಿತಿ ನನಗೆ ತಿಳಿದು ಬಂದಿದೆ, ಇದು ಭದ್ರತಾ ಲೋಪವಲ್ಲವೇ? ಎಂದರು ಭದ್ರತೆ ಇಲ್ಲದಿದ್ದರೆ, ಅದರ ಅರ್ಥವೇನು? ನೂರಾರು ಪ್ರವಾಸಿಗರು ಅಲ್ಲಿಗೆ ಹೋಗುತ್ತಾರೆ, ಅಂತಹ ಸ್ಥಳದಲ್ಲಿ ಪೊಲೀಸರು ಇರಬೇಕಲ್ಲವೇ? ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com