ನೆಲಮಂಗಲ: KSRTC-ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ

ವೇಗವಾಗಿ ಬಂದ KSRTC ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಬಳಿ ನಡೆದಿದೆ.
ನೆಲಮಂಗಲ: KSRTC-ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ
Updated on

ನೆಲಮಂಗಲ: ವೇಗವಾಗಿ ಬಂದ KSRTC ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಶಾಂತಿನಗರ ಗ್ರಾಮದ ಶ್ರೀನಿವಾಸ್, ಪುಟ್ಟಮ್ಮ ವರ್ಷಿಣಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಲೇಖನ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ನಾಗರತ್ನಮ್ಮ ಹಾಗೂ ವೆಂಕಟೇಶ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನೆ ಮಾಡಿದ್ದಾರೆ.

ನೆಲಮಂಗಲ: KSRTC-ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ
ಬೆಂಗಳೂರು: ವೇಗವಾಗಿ ಬಂದ ಆಂಬ್ಯುಲೆನ್ಸ್ ಹಲವಾರು ವಾಹನಗಳಿಗೆ ಡಿಕ್ಕಿ; ಒಬ್ಬ ಸಾವು; Video

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com