ಉಗ್ರರನ್ನು ಸದೆಬಡಿಯಲು ಪ್ರಧಾನಿ ಮೋದಿಗೆ ಜೆಡಿಎಸ್ ಬೆಂಬಲ: ಹೆಚ್.ಡಿ ದೇವೇಗೌಡ

ಹಾಸನ ತಾಲೂಕು ದ್ಯಾಪಲಾಪುರದಲ್ಲಿ ದೇಗುಲ ಉದ್ಘಾಟಿಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಉಗ್ರರ ವಿರುದ್ಧ ಪ್ರಧಾನಿ ದೃಢ ನಿರ್ಧಾರ ಕೈಗೊಂಡಿದ್ದಾರೆ
HD Devegowda
ಹೆಚ್ ಡಿ ದೇವೇಗೌಡ
Updated on

ಹಾಸನ: ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಸೋಮವಾರ ಹೇಳಿದ್ದಾರೆ.

ಹಾಸನ ತಾಲೂಕು ದ್ಯಾಪಲಾಪುರದಲ್ಲಿ ದೇಗುಲ ಉದ್ಘಾಟಿಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಉಗ್ರರ ವಿರುದ್ಧ ಪ್ರಧಾನಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಕಾಶ್ಮೀರದಲ್ಲಿ ಉಪಟಳ ನೀಡುತ್ತಿರುವ ಉಗ್ರರು ಎಲ್ಲೇ ಅಡಗಿದ್ದರೂ ಹೊರಗೆಳೆದು ಶಿಕ್ಷಿಸುವರೆಗೂ ಬಿಡುವುದಿಲ್ಲ ಎಂದು ಪ್ರಧಾನಿ ಘೋಷಿಸಿದ್ದಾರೆ.

ಯಾವುದೇ ಕ್ರಮ ಕೈಗೊಳ್ಳಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಉಗ್ರರನ್ನು ಸದೆಬಡಿಯಲು ಪ್ರಧಾನಿಗೆ ನಮ್ಮ ಬೆಂಬಲವಿದೆ ಎಂದರು.

HD Devegowda
'ದೇಶದ ಜನತೆ ಬಯಸಿದ್ದು ಖಂಡಿತವಾಗಿಯೂ ನಡೆಯುತ್ತೆ': ಪಹಲ್ಗಾಮ್ ದಾಳಿಗೆ ಪ್ರತೀಕಾರ ಕುರಿತು ರಾಜನಾಥ್ ಸಿಂಗ್ ಸ್ಫೋಟಕ ಹೇಳಿಕೆ

ಪಾಕಿಸ್ತಾನದಿಂದ ಆಮದಾಗುವ ಮತ್ತು ಪಾಕಿಸ್ತಾನಕ್ಕೆ ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ನಿರ್ಬಂಧ ಹೇರುವ ಕಠಿಣ ಕ್ರಮ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. 26 ಪ್ರವಾಸಿಗರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ನಂತರ ಸಿಂಧೂ ನದಿ ನೀರು ಒಪ್ಪಂದ ರದ್ದತಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹಲವಾರು ಕ್ರಮಗಳನ್ನು ಭಾರತ ತೆಗೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com