ಬೆಳಗಾವಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸಾವು; ಮಾಜಿ ಶಾಸಕನ ಪುತ್ರನಿಗೆ ಗಂಭೀರ ಗಾಯ

ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
Updated on

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಬಳಿ ಸೋಮವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಇಂದು ಸಂಜೆ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಈ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೈಲಹೊಂಗಲಕ್ಕೆ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡುವ ವೇಳೆ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಲ್ಟೋ ಕಾರಿನಲ್ಲಿದ್ದ ಅಯುಮ್ ಹಾಗೂ ಅವರ ಪತ್ನಿ ಮತ್ತು ಅವರ ಮಗು ಮೃತಪಟ್ಟಿದ್ದಾರೆ. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ನೆಲಮಂಗಲ: KSRTC-ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ

ಇನ್ನು ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಲಾಗಿದೆ.

ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com