
ತುಮಕೂರು: ಮನೆಯ ಹೊರಗೆ ಆಟವಾಡುತ್ತಿದ್ದ ಐದು ವರ್ಷದ ಬಾಲಕ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ದುರಂತ ಘಟನೆ ಮಂಗಳವಾರ ತುಮಕೂರಿನಲ್ಲಿ ನಡೆದಿದೆ.
ಮೃತನನ್ನು ತುರುವೇಕೆರೆ ಪಟ್ಟಣದ ಬಳಿಯ ಗೊರಘಟ್ಟ ಗ್ರಾಮದ ನಿವಾಸಿ ಚಂದ್ರಯ್ಯ ಅವರ ಮಗ ಪೋಷಕ ಶೆಟ್ಟಿ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ವಿದ್ಯುತ್ ತಂತಿ ತುಂಡಾಗಿ ಮನೆಯ ಮುಂಭಾಗದ ಬೇಲಿಯ ಮೇಲೆ ಬಿದ್ದಿದೆ. ಇದನ್ನು ಗಮನಿಸದ ಪೋಷಕ ಬೆಳಿಗ್ಗೆ ಆಟವಾಡುತ್ತಿದ್ದಾಗ, ಆಕಸ್ಮಿಕವಾಗಿ ಬೇಲಿಗೆ ತಾಗಿ ವಿದ್ಯುತ್ ಸ್ಪರ್ಶವಾಗಿದೆ. ಗಾಯಗಳಿಂದ ಪೋಷಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬಾಲಕನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ದಂಡಿನಶಿವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Advertisement