ಕಟ್ಟಡ ಬೈಲಾ ಉಲ್ಲಂಘನೆ: 7 ಅಂತಸ್ತಿನ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಡಿತ

2023 ರಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸೌಂದರ್ಯ ಲೇಔಟ್‌ನ ಭರತ್ ಎಸ್ ಹೇಳಿದ್ದಾರೆ.
Building at Saundarya Layout
ಬಾಗಲಕೋಟೆಯಲ್ಲಿರುವ ಸೌಂದರ್ಯ ಲೇ ಔಟ್ ನಲ್ಲಿರುವ ಕಟ್ಟಡ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(BBMP) ಬಾಗಲಗುಂಟೆ ವಾರ್ಡ್ 14 ರ ಸೌಂದರ್ಯ ಲೇಔಟ್‌ನಲ್ಲಿರುವ ಏಳು ಅಂತಸ್ತಿನ ಕಟ್ಟಡಕ್ಕೆ ಕಟ್ಟಡ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದ ಮೇಲೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

2023 ರಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸೌಂದರ್ಯ ಲೇಔಟ್‌ನ ಭರತ್ ಎಸ್ ಹೇಳಿದ್ದಾರೆ.

ನಿಯಮಗಳನ್ನು ಉಲ್ಲಂಘಿಸಿ ಕೃಷಿ ಭೂಮಿಯಲ್ಲಿ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದು ನನ್ನ ದೂರಿನ ಹೊರತಾಗಿಯೂ, ಬಿಬಿಎಂಪಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಒತ್ತಾಯಿಸುತ್ತಿದ್ದಂತೆ, ಬಿಬಿಎಂಪಿ ಕೆಲವು ದಿನಗಳ ಹಿಂದೆ ನನ್ನ ದೂರಿನ ಮೇರೆಗೆ ಕ್ರಮ ಕೈಗೊಂಡು ನೋಟಿಸ್ ಕಳುಹಿಸಿತು. ಕ್ರಮ ಕೈಗೊಳ್ಳುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಗೆ ಪಾಲಿಕೆ ನಿರ್ದೇಶನ ನೀಡಿದೆ ಎಂದು ಭರತ್ ಹೇಳಿದರು.

Building at Saundarya Layout
ಬೈಲಾ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ಶೃಂಗೇರಿ ಮಠ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆ ಕೆಡವಲು BBMP ಮುಂದು!

ಬೆಸ್ಕಾಂ ಅಧಿಕಾರಿಗಳು ನಿನ್ನೆ ಕಟ್ಟಡಕ್ಕೆ ಭೇಟಿ ನೀಡಿ ಮಂಜಪ್ಪ ಅವರ ಅನಧಿಕೃತ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಅಧಿಕಾರಿಗಳು ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ, ಅವರ ಉತ್ತರ ಕೇಳಿದ್ದರು. ಅವರು ಪ್ರತಿಕ್ರಿಯಿಸದ ಕಾರಣ, ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ಭರತ್ ಹೇಳಿದರು.

ಬಿಬಿಎಂಪಿಯ ಪತ್ರದ ಆಧಾರದ ಮೇಲೆ, ನ್ಯಾಯವ್ಯಾಪ್ತಿಯ ಬೆಸ್ಕಾಂ ಕಟ್ಟಡ ಮಾಲೀಕರಿಗೆ ಒಂದು ವಾರದೊಳಗೆ ಉತ್ತರಿಸುವಂತೆ ನೋಟಿಸ್ ನೀಡಲಾಗಿದೆ ಎಂದು ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪಣೀಂದ್ರ ತಿಳಿಸಿದ್ದಾರೆ.

ಮಂಜಪ್ಪ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ನಾವು ಸೋಮವಾರ ಲೇಔಟ್‌ಗೆ ತಂಡವನ್ನು ಕಳುಹಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com