ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಪೊಲೀಸ್ ಭದ್ರತೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ

ರಾಜ್ಯದ ನಿರ್ದಿಷ್ಟ ಸ್ಥಳಗಳಲ್ಲಿ ಮಹೇಶ್ ಜೋಶಿಯವರಿಗೆ ಭದ್ರತೆ ನೀಡಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರು ಗ್ರಹಿಸಿದ್ದಾರೆ.
Mahesh Joshi
ಮಹೇಶ್ ಜೋಶಿ
Updated on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (KSP) ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರಿಗೆ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ರಕ್ಷಣೆ ಹಾಗೂ ಖಾಸಗಿ ಗನ್ ಮ್ಯಾನ್ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮಹೇಶ್ ಜೋಶಿ ಅವರು ಸಲ್ಲಿಸಿದ ಅರ್ಜಿಯ ಕುರಿತು ಹೊರಡಿಸಲಾದ ನಿರ್ದೇಶನಗಳಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯದ ಮುಂದೆ ಇರಿಸಲಾದ ಬೆದರಿಕೆ ವಿಶ್ಲೇಷಣಾ ವರದಿಯನ್ನು ಪರಿಶೀಲಿಸಿದ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಇತ್ತೀಚೆಗೆ ಈ ಆದೇಶವನ್ನು ಹೊರಡಿಸಿದ್ದಾರೆ.

ರಾಜ್ಯದ ನಿರ್ದಿಷ್ಟ ಸ್ಥಳಗಳಲ್ಲಿ ಮಹೇಶ್ ಜೋಶಿಯವರಿಗೆ ಭದ್ರತೆ ನೀಡಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರು ಗ್ರಹಿಸಿದ್ದಾರೆ. ರಾಜ್ಯದ ಹಲವಾರು ಸ್ಥಳಗಳಲ್ಲಿ ಬೆದರಿಕೆ ಗ್ರಹಿಕೆ ಇರುವುದರಿಂದ, ಅರ್ಜಿದಾರರು ರಾಜ್ಯದೊಳಗೆ ಪ್ರಯಾಣಿಸುವಾಗ, ಈ ಹಿಂದೆ ಹೊರಡಿಸಿದ ಆದೇಶದ ಪ್ರಕಾರ ಅರ್ಜಿದಾರರಿಗೆ ಪೊಲೀಸ್ ರಕ್ಷಣೆ ನೀಡುವಂತೆ ಮತ್ತು ಖಾಸಗಿ ಭದ್ರತೆ/ಗನ್ ಮ್ಯಾನ್ ಸೇವೆಗಳನ್ನು ಒದಗಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡುವುದು ಸೂಕ್ತವೆಂದು ಭಾವಿಸುತ್ತೇನೆ ಎಂದಿದ್ದಾರೆ.

Mahesh Joshi
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸಲು ಉದ್ಯಮಿಗಳ ಜೊತೆ ಚರ್ಚಿಸುತ್ತೇವೆ: ಮಹೇಶ್ ಜೋಶಿ (ಸಂದರ್ಶನ)

ಮಹೇಶ್ ಜೋಶಿಯವರು ಪ್ರಯಾಣಿಸುವಾಗಲೆಲ್ಲಾ ಆಯಾ ನ್ಯಾಯವ್ಯಾಪ್ತಿಯ ಪೊಲೀಸರು ಅಂತಹ ರಕ್ಷಣೆ ನೀಡುತ್ತಾರೆ ಎಂದು ನ್ಯಾಯಾಧೀಶರು ಅರ್ಜಿಯನ್ನು ವಿಲೇವಾರಿ ಮಾಡುವಾಗ ಹೇಳಿದರು.

ಇತ್ತೀಚೆಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಂತರ, ಸಮ್ಮೇಳನಕ್ಕೂ ಮುನ್ನ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ ಸ್ಥಾಪಿತ ಹಿತಾಸಕ್ತಿಗಳಿಂದ ತನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಮಹೇಶ್ ಜೋಶಿ ದೂರು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com