Operation Sindoor ಎಫೆಕ್ಟ್​: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದು

ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದ್ದು, ಅದೇ ರೀತಿಯಾಗಿ ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ
ಬೆಂಗಳೂರು ವಿಮಾನ ನಿಲ್ದಾಣ
Updated on

ಬೆಂಗಳೂರು: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್​ನ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದ್ದು, ಅದೇ ರೀತಿಯಾಗಿ ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ.

ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಗುಜರಾತ್, ರಾಜಸ್ಥಾನದ ಜೋಧಪುರ್, ಉತ್ತರ ಪ್ರದೇಶದ ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್​​ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣ
Watch | Operation Sindoor: ಪಾಕಿಸ್ತಾನದ 9 ಕಡೆ ಭಾರತ Airstrike; 21 ಉಗ್ರ ಶಿಬಿರ ನಾಶ

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ಕಾರಣ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಿ ಪರಿಶೀಲಿಸಲು ವಿನಂತಿಸಲಾಗಿದೆ.

ಪ್ರಯಾಣಿಕರು ತಮ್ಮ ವಿಮಾನಗಳ ವೇಳಾಪಟ್ಟಿಯಲ್ಲಿನ ಬದಲಾವಣೆಗಳನ್ನು ಆಯಾ ವಿಮಾನಯಾನ ಸಂಸ್ಥೆಗಳ ಅಧಿಕೃತ ಎಕ್ಸ್ ಖಾತೆಗಳ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com