'Operation Sindoor': ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್ ಇಂಡಿಯಾ!

ಇಂದು ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಭದ್ರತಾ ಸಂಬಂಧಿತ ಕಾರಣಗಳಿಂದಾಗಿ ಗುರುತು ಬಹಿರಂಗಪಡಿಸದ ಪ್ರಯಾಣಿಕನನ್ನು ಆಫ್‌ಲೋಡ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.
Air India
ಏರ್ ಇಂಡಿಯಾ
Updated on

ಬೆಂಗಳೂರು: ದೇಶಾದ್ಯಂತ ಬಿಗಿ ಭದ್ರತೆಯ ನಡುವೆ, ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಏರ್ ಇಂಡಿಯಾ ವಿಮಾನದಿಂದ ಒಬ್ಬ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಪ್ರಯಾಣಿಕನು ಬೆಂಗಳೂರಿನಿಂದ ನವದೆಹಲಿಗೆ AI-2820 ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು

ಇಂದು ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಭದ್ರತಾ ಸಂಬಂಧಿತ ಕಾರಣಗಳಿಂದಾಗಿ ಗುರುತು ಬಹಿರಂಗಪಡಿಸದ ಪ್ರಯಾಣಿಕನನ್ನು ಆಫ್‌ಲೋಡ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

Air India
Operation Sindoor ಎಫೆಕ್ಟ್​: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದು

ಈ ಘಟನೆಯನ್ನು ಖಚಿತಪಡಿಸಿದ ಏರ್ ಇಂಡಿಯಾ ಅಧಿಕಾರಿಯೊಬ್ಬರು, "ನಮಗೆ ಘಟನೆಯ ಬಗ್ಗೆ ಮಾಹಿತಿ ಇದೆ. ಆದರೆ ಯಾವುದೇ ವಿವರಗಳನ್ನು ಹಂಚಿಕೊಳ್ಳುವುದಿಲ್ಲ." "ಪ್ರಯಾಣಿಕನನ್ನು ಕೆಳಗಿಳಿಸಲು ಒಂದು ಕಾರಣವಿರುತ್ತದೆ ಮತ್ತು ಇದು ನಿಯಮಿತವಾಗಿ ಮಾಡುವ ಕೆಲಸವಲ್ಲ. ನಿರ್ದಿಷ್ಟ ಕಾರಣಗಳಿದ್ದವು, ಅದನ್ನು ನಾವು ಬಹಿರಂಗಪಡಿಸುವ ಸ್ಥಿತಿಯಲ್ಲಿಲ್ಲ" ಎಂದು ತಿಳಿಸಿದ್ದಾರೆ.

ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಇಂದು ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. 'ಆಪರೇಷನ್ ಸಿಂಧೂರ್' ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com