ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ದೂರು

ಚಕ್ರವರ್ತಿ ಸೂಲಿಬೆಲೆ ಪ್ರತಿ ಬಾರಿಯೂ ಸಹ ಹಿಂದೂ ಮುಸ್ಲಿಂ ಹಾಗೂ ಭಾರತ- ಪಾಕಿಸ್ತಾನ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾರೆ.
Chakravarthi sulibele
ಚಕ್ರವರ್ತಿ ಸೂಲಿಬೆಲೆ
Updated on

ಬೆಂಗಳೂರು: ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಭಾರತೀಯ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಅಪ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪಾಕಿಸ್ತಾನದ ಉಗ್ರರ ಅಡಗು ತಾಣಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಸೂಲಿಬೆಲೆ ಚಕ್ರವರ್ತ,ಭಾರತದ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕೂಡಲೇ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು, ಕೂಡಲೇ ಬಂಧಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಪ್ರತಿ ಬಾರಿಯೂ ಸಹ ಹಿಂದೂ ಮುಸ್ಲಿಂ ಹಾಗೂ ಭಾರತ- ಪಾಕಿಸ್ತಾನ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾರೆ. ಸುಳ್ಳನ ಪ್ರಚಾರ ಮಾಡಿ ಸತ್ಯದ ರೀತಿ ಬಿಂಬಿಸುವುದು ಅವರ ಒಂದಂಶದ ಕಾರ್ಯಕ್ರಮವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Chakravarthi sulibele
ಸರ್ಕಾರನೇ ಹೇಳಿದೆ: ಹಿಂದೂಗಳೇ.. ನೀವು ಧೈರ್ಯವಾಗಿ ಮತಾಂತರ ಮಾಡಿ- ಚಕ್ರವರ್ತಿ ಸೂಲಿಬೆಲೆ

ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಂಭವ ಇದೆ ಎಂಬ ಹೇಳಿಕೆ ನೀಡುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಪಾಕಿಸ್ತಾನವನ್ನು ಬೆಂಬಲಿಸುತ್ತಿದೆ ಎಂಬ ಆರೋಪ ಹಾಗೂ ಆಧಾರ ರಹಿತ ಹೇಳಿಕೆ ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಚಕ್ರವರ್ತಿ ಸೂಲಿಬೆಲೆ ಅವರನ್ನು ಬಂಧಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com