ಇಂದಿರಾ ಕ್ಯಾಂಟೀನ್‌ನಲ್ಲಿ 7 ಕೋಟಿ ರೂ ಅವ್ಯವಹಾರ: BBMP ಉಪ ಆರೋಗ್ಯಾಧಿಕಾರಿ ಅಮಾನತು

ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆದಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Indira Canteen Casual Images
ಇಂದಿರಾ ಕ್ಯಾಂಟೀನ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ದಕ್ಷಿಣ ವಲಯದ ಇಂದಿರಾ ಕ್ಯಾಂಟೀನ್‌ನಲ್ಲಿ ಸುಮಾರು 7 ಕೋಟಿ ರೂ.ಗಳ ಅವ್ಯವಹಾರ ನಡೆಸಿದ್ದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಲಯದ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಪಿ. ಅವರನ್ನು ಅಮಾನತುಗೊಳಿಸಲಾಗಿದೆ.

ಪಾಲಿಕೆಯ ದಕ್ಷಿಣ ವಲಯಕ್ಕೆ ಆಹಾರ ಪೂರೈಕ ಮಾಡಿದ ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆದಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆರೋಗ್ಯಾಧಿಕಾರಿಯಾಗಿದ್ದ ಡಾ.ಕಲ್ಪನಾ ಪಿ ಅವರು ಆರ್ಡರ್ ಗಳನ್ನು ಪರಿಶೀಲಿಸದೆ ಅಂದಾಜು ರೂ. 9.72 ಕೋಟಿ ಪಾವತಿಸಿದ್ದಾರೆ. ಆದರೆ ಅದಕ್ಕೆ ವಾಸ್ತವವಾಗಿ ಪಾವತಿಸಬೇಕಾದದ್ದು ಕೇವಲ ರೂ. 2.27 ಕೋಟಿ ಮಾತ್ರ,. ಇದರಿಂದ ಹೆಚ್ಚುವರಿಯಾಗಿ ಸುಮಾರು 7 ಕೋಟಿ ರೂ. ಪಾವತಿಸಿದ್ದಕ್ಕಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Indira Canteen Casual Images
BBMP ಯುಗಾಂತ್ಯ: ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ; ಐದು ನಿಗಮಗಳ ರಚನೆ ಸಾಧ್ಯತೆ

ಇದೀಗ ಮೊತ್ತದ ವಸೂಲಾತಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲಿಕೆ ಆಡಳಿತ ಈ ಪ್ರಕರಣದ ಕೂಲಂಕಷ ತನಿಖೆ ನಡೆಸುತ್ತಿದೆ. ಹೆಚ್ಚುವರಿ ಜವಾಬ್ದಾರಿಯನ್ನು ಮತ್ತೊಬ್ಬ ಅಧಿಕಾರಿಗೆ ವಹಿಸಲಾಗಿದೆ.

ಜೊತೆಗೆ ಡಾ.ಸುರೇಶ್ ಜಿ.ಕೆ. ಅವರಿಗೆ ದಕ್ಷಿಣ ವಲಯದ ಹೆಚ್ಚುವರಿ ಆರೋಗ್ಯಾಧಿಕಾರಿ ಜವಾಬ್ದಾರಿ ನೀಡಲಾಗಿದೆ. ಅವರು ಪ್ರಸ್ತುತ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಉಪ ಆರೋಗ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com