ಕೊಪ್ಪಳ: ನಿಷೇಧದ ನಡುವೆಯೂ, ತುಂಗಭದ್ರಾ ಡ್ಯಾಂನಲ್ಲಿ ಎಂಜಿನಿಯರ್ ಮಗನ ನಿಶ್ಚಿತಾರ್ಥ!

ಯುದ್ಧದಂತಹ ಪರಿಸ್ಥಿತಿಯಿಂದಾಗಿ ಮೇ 8 ರಿಂದ ಅಣೆಕಟ್ಟುಗಳು ಮತ್ತು ದೇವಾಲಯಗಳು ಸೇರಿದಂತೆ ಅನೇಕ ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
Arrangements made on the premises of TB Dam for the engagement
ತುಂಗಭದ್ರಾ ಡ್ಯಾಂನಲ್ಲಿ ಎಂಜಿನಿಯರ್ ಮಗನ ನಿಶ್ಚಿತಾರ್ಥ
Updated on

ಕೊಪ್ಪಳ: ಆಪರೇಷನ್ ಸಿಂಧೂರ್ ಕಾರಣದಿಂದಾಗಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ, ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ, ತುಂಗಭದ್ರಾ ಅಣೆಕಟ್ಟಿನ ಕಾರ್ಯನಿರ್ವಾಹಕ ಎಂಜಿನಿಯರ್ ತಮ್ಮ ಮಗನ ನಿಶ್ಚಿತಾರ್ಥ ಸಮಾರಂಭವನ್ನು ಮೇ 10 ರಂದು ಜಲಾಶಯದ ಆವರಣದಲ್ಲಿ ಆಯೋಜಿಸಿದ್ದರು.

ಹಿರಿಯ ಅಧಿಕಾರಿ ಗಿರೀಶ್ ಮೇಟಿ ಆಯೋಜಿಸಿದ್ದ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸಿದ್ದರು, ಆದರೆ ಯುದ್ಧದಂತಹ ಪರಿಸ್ಥಿತಿಯಿಂದಾಗಿ ಮೇ 8 ರಿಂದ ಅಣೆಕಟ್ಟುಗಳು ಮತ್ತು ದೇವಾಲಯಗಳು ಸೇರಿದಂತೆ ಅನೇಕ ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಮೇ 10ರಂದು ನಿಶ್ಚಿತಾರ್ಥ ನಡೆದಿದ್ದು, ಶಾಮಿಯಾನ, ಖುರ್ಚಿ ಹಾಕಿ ನೂರಾರು ಜನರಿಗೆ ಹೋಳಿಗೆ ಊಟ ಹಾಕಿಸಿರುವುದಾಗಿ ತಿಳಿದುಬಂದಿದೆ. ಜೊತೆಗೆ ಟಿಬಿ ಡ್ಯಾಂ ಹಿಂಭಾಗಕ್ಕೆ ಹೋಗದಂತೆ ಚೆಕ್‌ಪೋಸ್ಟ್ ನಿರ್ಮಾಣ ಮಾಡಲಾಗಿತ್ತು. ಚೆಕ್‌ಪೋಸ್ಟ್ ಮೂಲಕ ನೂರಾರು ಜನರು ಹಾದು ಹೋಗಿರುವುದು ತಿಳಿದು ಬಂದಿದೆ.

ನಿಯಮಗಳನ್ನು ಉಲ್ಲಂಘಿಸಿದ್ದರಿಂದ, ಮೇಟಿ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸುತ್ತಿದ್ದಾರೆ. ಮೇಟಿಯ ಮಗನ ನಿಶ್ಚಿತಾರ್ಥ ಸಮಾರಂಭಕ್ಕಾಗಿ ನೂರಾರು ಅತಿಥಿಗಳು ಅಣೆಕಟ್ಟಿಗೆ ಆಗಮಿಸುತ್ತಿರುವುದನ್ನ ಸ್ಥಳೀಯ ಜನರು ನೋಡಿದ್ದಾರೆ. ಹೀಗಾಗಿ ಆ ಸಮಯದಲ್ಲಿ ಜಾರಿಯಲ್ಲಿದ್ದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸಾಬೀತಾಗಿದೆ.

ಈ ಸಂಬಂಧ ಪ್ರತಿಕ್ರಿಯೆಗಾಗಿ ಮೇಟಿ ಅವರಿಗೆ ಅನೇಕ ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಣೆಕಟ್ಟು ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಾವು ಅದರ ಬಗ್ಗೆ ವಿವರವಾಗಿ ಪರಿಶೀಲಿಸುತ್ತೇವೆ. ಯಾವುದೇ ಅಧಿಕಾರಿ ತಪ್ಪು ಮಾಡಿದ್ದರೆ, ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ" ಎಂದು ಟಿಬಿ ಡ್ಯಾಮ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

image-fallback
'ಟಿಬಿ ಡ್ಯಾಂ ನೀರಿನ ಸಾಮರ್ಥ್ಯ ಹೆಚ್ಚಿಸಲು ಕಾರ್ಯ ಯೋಜನೆ ರೂಪಿಸಿ'

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com