ವಿಧಾನಸಭೆಯಿಂದ ಶಾಸಕರ ಅಮಾನತು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಬಿಜೆಪಿ ನಿರ್ಧಾರ

ಶಾಸಕರು ಮತ್ತು ಬಿಜೆಪಿ ಪಕ್ಷದ ನಾಯಕರು ಅಮಾನತುಗೊಂಡಾಗಿನಿಂದ ಸ್ಪೀಕರ್ ಅವರನ್ನು ಸಂಪರ್ಕಿಸುತ್ತಿದ್ದರು ಯಾವುದೇ ಪ್ರಯೋಜನವಾಗಲಿಲ್ಲ.
Aravind Bellad
ಶಾಸಕ ಅರವಿಂದ್ ಬೆಲ್ಲದ್
Updated on

ಬೆಂಗಳೂರು: ವಿಧಾನಸಭೆಯಿಂದ 18 ಪಕ್ಷದ ಶಾಸಕರನ್ನು ಸ್ಪೀಕರ್ ಯು.ಟಿ. ಖಾದರ್ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ರಾಜ್ಯ ಬಿಜೆಪಿ ನಿರ್ಧರಿಸಿದೆ.

ಹನಿ-ಟ್ರ್ಯಾಪಿಂಗ್ ಹಗರಣ ಮತ್ತು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕುರಿತು ಬಿಸಿಯಾದ ವಾದ ಮತ್ತು ಚರ್ಚೆ ನಡೆಯುತ್ತಿರುವಾಗಲೇ, ಮಾರ್ಚ್‌ನಲ್ಲಿ ಸ್ಪೀಕರ್ ಶಾಸಕರನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿತ್ತು.

ಶಾಸಕರು ಮತ್ತು ಬಿಜೆಪಿ ಪಕ್ಷದ ನಾಯಕರು ಅಮಾನತುಗೊಂಡಾಗಿನಿಂದ ಸ್ಪೀಕರ್ ಅವರನ್ನು ಸಂಪರ್ಕಿಸುತ್ತಿದ್ದರು ಯಾವುದೇ ಪ್ರಯೋಜನವಾಗಲಿಲ್ಲ. ಕಳೆದ ತಿಂಗಳು ರಾಜ್ಯಪಾಲರನ್ನು ಸಂಪರ್ಕಿಸಿ ತಮ್ಮ ಅಮಾನತು ರದ್ದುಗೊಳಿಸುವಂತೆ ಕೋರಿದರು. ಅಮಾನತುಗೊಂಡ ಶಾಸಕರು ವಿಧಾನಸಭೆಯ ಕಲಾಪಗಳಿಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ ಮಾತ್ರವಲ್ಲದೆ ಸಮಿತಿಯ ಯಾವುದೇ ಸಭೆಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಲಾಗಿದೆ.

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಮತ್ತು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿ ಸ್ಪೀಕರ್‌ಗೆ ಒಂದಕ್ಕಿಂತ ಹೆಚ್ಚು ಅಧಿವೇಶನಗಳಿಗೆ ಶಾಸಕರನ್ನು ಅಮಾನತುಗೊಳಿಸುವ ಅಧಿಕಾರವಿಲ್ಲ ಎಂದು ಹೇಳಿದರು. ಸಮಿತಿ ಸಭೆಗಳಿಗೆ ಹಾಜರಾಗುವುದು ಸೇರಿದಂತೆ ಶಾಸಕರು ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಳ್ಳುವುದನ್ನು ಸ್ಪೀಕರ್ ನಿರ್ಬಂಧಿಸಲು ಸಾಧ್ಯವಿಲ್ಲ. ನಾವು ಸ್ಪೀಕರ್ ಅವರನ್ನು ಸಂಪರ್ಕಿಸುತ್ತಿದ್ದೇವೆ, ಆದರೆ ಅವರು ಪ್ರತಿಕ್ರಿಯಿಸುತ್ತಿಲ್ಲ" ಎಂದು ಅವರು ಹೇಳಿದರು. ಸ್ಪೀಕರ್ ಕಾಂಗ್ರೆಸ್ ಪಕ್ಷದ ವಕ್ತಾರರಂತೆ ವರ್ತಿಸುತ್ತಾರೆ ಎಂದು ಅವರು ಹೇಳಿದರು. ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಮೂರು ದಿನಗಳ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನದಲ್ಲಿ ಸ್ಪೀಕರ್ ವಿರುದ್ಧ ಪ್ರತಿಭಟಿಸಲು ಬಿಜೆಪಿ ಯೋಜಿಸುತ್ತಿದೆ.

Aravind Bellad
ಸಿಎಂಗೆ ರಾಜ್ಯಪಾಲರ ಪತ್ರ: 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಸಲಹೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com