Govindraj Hedge
ಗೋವಿಂದರಾಜ್ ಹೆಗ್ಡೆ

ಪ್ರಸ್ತಾವಿತ ಅಬಕಾರಿ ಸುಂಕ ಹೆಚ್ಚಳಕ್ಕೆ ರಾಜ್ಯ ವೈನ್ ವ್ಯಾಪಾರಿಗಳ ವಿರೋಧ: CM ಭೇಟಿ ಮಾಡಿ ಮನವಿ ಸಲ್ಲಿಕೆ

ಕರಡು ಅಧಿಸೂಚನೆಯನ್ನು ಮೇ 15 ರಂದು ಹೊರಡಿಸಲಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿದೆ. ಈ ವೇಳೆ ಪರವಾನಗಿ ನವೀಕರಣ ಆರಂಭವಾಗುತ್ತವೆ.
Published on

ಬೆಂಗಳೂರು: ರಾಜ್ಯ ಸರ್ಕಾರವು ಅಬಕಾರಿ ಪರವಾನಗಿ ಶುಲ್ಕವನ್ನು ಹೆಚ್ಚಿಸುವ ಕರಡು ಪ್ರಸ್ತಾವನೆಯನ್ನು ಮಂಡಿಸಿರುವುದು, ವೈನ್ ವ್ಯಾಪಾರಿಗಳನ್ನು ಕೆರಳಿಸಿದೆ. ಶುಲ್ಕ ಹೆಚ್ಚಳವನ್ನು ವಿರೋಧಿಸುತ್ತಿರುವ ವೈನ್ ವ್ಯಾಪಾರಿಗಳ ಸಂಘಗಳ ಒಕ್ಕೂಟವು ಗುರುವಾರ ಎಲ್ಲಾ ಜಿಲ್ಲಾ ಸದಸ್ಯರೊಂದಿಗೆ ಸಭೆ ನಡೆಸಿ ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಿದೆ.

ಕರಡು ಅಧಿಸೂಚನೆಯನ್ನು ಮೇ 15 ರಂದು ಹೊರಡಿಸಲಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿದೆ. ಈ ವೇಳೆ ಪರವಾನಗಿ ನವೀಕರಣ ಆರಂಭವಾಗುತ್ತವೆ. ಈ ವಿಷಯದ ಬಗ್ಗೆ ಚರ್ಚಿಸಲು ಸದಸ್ಯರು ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಕರ್ನಾಟಕ ವೈನ್ ವ್ಯಾಪಾರಿಗಳ ಸಂಘದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.

ಗುರುವಾರ, ಅಬಕಾರಿ ಪರವಾನಗಿ ಶುಲ್ಕದಲ್ಲಿ ಪ್ರಸ್ತಾವಿತ ಹೆಚ್ಚಳದ ಕುರಿತು ಮುಂದಿನ ಕ್ರಮದ ಕುರಿತು ಚರ್ಚಿಸಲು ಎಲ್ಲಾ ಜಿಲ್ಲಾ ಸಂಘಗಳ ಮುಖ್ಯಸ್ಥರನ್ನು ಸಭೆಗೆ ಕರೆಯಲಾಗಿದೆ ಎಂದು ಅವರು ಹೇಳಿದರು, ಸಂಘವು ಇನ್ನೂ ಡ್ರೈ ಡೇ ಆಚರಿಸುವ ಬಗ್ಗೆ ನಿರ್ಧರಿಸಿಲ್ಲ ಎಂದು ಹೇಳಿದರು.

 Govindraj Hedge
ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ BAI ಪತ್ರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com