ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ "ಅಪೂರ್ಣ"; ಮುಂದಿನ ಸಭೆಯಲ್ಲಿ ಮತ್ತೆ ಚರ್ಚೆ

ಹೆಚ್ಚಿನ ಸಚಿವರು ಸಮೀಕ್ಷೆಯ ಕುರಿತು ತಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲಿಖಿತವಾಗಿ ಸಲ್ಲಿಸಿದ್ದಾರೆ.
HK Patil
ಎಚ್​ಕೆ ಪಾಟೀಲ್
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 'ಜಾತಿ ಗಣತಿ' ಎಂದು ಜನಪ್ರಿಯವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಮೇಲಿನ ಚರ್ಚೆ "ಅಪೂರ್ಣ"ವಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಚರ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಹೇಳಿದ್ದಾರೆ.

ಹೆಚ್ಚಿನ ಸಚಿವರು ಸಮೀಕ್ಷೆಯ ಕುರಿತು ತಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲಿಖಿತವಾಗಿ ಸಲ್ಲಿಸಿದ್ದಾರೆ.

"ಇಂದು ಮತ್ತೊಮ್ಮೆ ಸಚಿವ ಸಂಪುಟ ಸಭೆಯು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಕುರಿತು ಚರ್ಚಿಸಿತು. ಚರ್ಚೆ ಅಪೂರ್ಣವಾಗಿತ್ತು. ಮುಖ್ಯಮಂತ್ರಿಗಳು ಈ ಹಿಂದೆ ಸಂಪುಟ ಸಚಿವರು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದರು ಮತ್ತು ಮೂರು ಅಥವಾ ನಾಲ್ಕು ಸಚಿವರು ಹೊರತುಪಡಿಸಿ ಹೆಚ್ಚಿನ ಸಚಿವರ ತಮ್ಮ ಅಭಿಪ್ರಾಯಗಳು ಮುಖ್ಯಮಂತ್ರಿಗೆ ಲಿಖಿತವಾಗಿ ಸಲ್ಲಿಸಿದ್ದಾರೆ" ಎಂದು ಎಚ್ ಕೆ ಪಾಟೀಲ್ ತಿಳಿಸಿದರು.

HK Patil
ಜಾತಿ ಗಣತಿ ಸಮೀಕ್ಷಾ ವರದಿ ಸ್ತಬ್ಧ: ತೆರೆಮರೆಗೆ ಸರಿದ ಸಿಎಂ ಬದಲಾವಣೆ ವಿಚಾರ; ಆಡಳಿತದತ್ತ ಸಿದ್ದರಾಮಯ್ಯ ಚಿತ್ತ!

ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಕೆ ಪಾಟೀಲ್ ಅವರು, "ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಥವಾ ಅದರ ನಂತರದ ಸಭೆಯಲ್ಲಿ, ಕೆಲವು ವಿವರಗಳನ್ನು ಪಡೆದು ಅಧ್ಯಯನ ಮಾಡಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.

ಜಾತಿ ಗಣತಿ ಬಗ್ಗೆ ಸಂಪುಟದಲ್ಲಿ ಪರ, ವಿರುದ್ಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಸಚಿವರಿಗೂ ತಮ್ಮ ನಿಲುವನ್ನು ಲಿಖಿತವಾಗಿ ತಿಳಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಕೇವಲ 11 ಮಂದಿ ಮಾತ್ರ ಲಿಖಿತ ಅಭಿಪ್ರಾಯ ನೀಡಿದ್ದ ಹಿನ್ನೆಲೆಯಲ್ಲಿ ಮೇ 10 ರಂದು ನಡೆದ ಕ್ಯಾಬಿನೆಟ್‌ನಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಮುಂದೂಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com