Bengaluru Metro ಹಂತ-2, 3ಎ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರ ಪರಿಗಣಿಸಲಿದೆ: ಕೇಂದ್ರ ಸಚಿವ Manohar Lal Khattar

ಪ್ರಸ್ತುತ ಬೆಂಗಳೂರಿನಲ್ಲಿ ಸುಮಾರು 75 ಕಿ.ಮೀ ಮೆಟ್ರೋ ಜಾಲ ಕಾರ್ಯನಿರ್ವಹಿಸುತ್ತಿದೆ ಮತ್ತು ಸುಮಾರು 145 ಕಿ.ಮೀ ಮೆಟ್ರೋ ಜಾಲ ನಿರ್ಮಾಣ ಹಂತದಲ್ಲಿದೆ.
Manohar Lal Khattar
ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್
Updated on

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ಅನುಮೋದನೆ ಪಡೆದ ನಂತರ ಕೇಂದ್ರ ಸರ್ಕಾರವು ಬೆಂಗಳೂರು ಮೆಟ್ರೋ ಹಂತ-2 ಮತ್ತು 3ಎ ಪ್ರಸ್ತಾವನೆಗಳನ್ನು ಪರಿಶೀಲಿಸಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳು ಮತ್ತು ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದ ಮನೋಹರ್ ಲಾಲ್ ಖಟ್ಟರ್, ನಗರ ಸುಧಾರಣೆಗಳಿಗಾಗಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ಸಹಾಯಕ್ಕಾಗಿ (SSASCI) 2025-26 ರ ತ್ಯಾಜ್ಯ ನಿರ್ವಹಣೆ (legacy waste management) ಮತ್ತು ಟ್ಯಾಪ್ ಯೋಜನೆಗೆ ಆದ್ಯತೆ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಅಂತೆಯೇ ವಿವಿಧ ಕಾರ್ಯಾಚರಣೆಗಳ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಬೆಂಗಳೂರು ಮೆಟ್ರೋ ಹಂತ-2 ಯೋಜನೆಯ ಪರಿಷ್ಕೃತ ವೆಚ್ಚವನ್ನು ರಾಜ್ಯ ಸಚಿವ ಸಂಪುಟವು ಪ್ರಸ್ತಾವನೆಯನ್ನು ಅನುಮೋದಿಸಿದ ನಂತರ ಪರಿಗಣಿಸಲಾಗುವುದು ಎಂದು ಹೇಳಿದರು.

"ಪ್ರಸ್ತುತ ಬೆಂಗಳೂರಿನಲ್ಲಿ ಸುಮಾರು 75 ಕಿ.ಮೀ ಮೆಟ್ರೋ ಜಾಲ ಕಾರ್ಯನಿರ್ವಹಿಸುತ್ತಿದೆ ಮತ್ತು ಸುಮಾರು 145 ಕಿ.ಮೀ ಮೆಟ್ರೋ ಜಾಲ ನಿರ್ಮಾಣ ಹಂತದಲ್ಲಿದೆ. ಇತ್ತೀಚೆಗೆ, ಕೆಲವು ತಿಂಗಳ ಹಿಂದೆ, ಕೇಂದ್ರ ಸರ್ಕಾರವು 15,600 ಕೋಟಿ ರೂ. ವೆಚ್ಚದಲ್ಲಿ 45 ಕಿ.ಮೀ ಮೆಟ್ರೋ ಹಂತ-3 ಜಾಲವನ್ನು ಮಂಜೂರು ಮಾಡಿತು" ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಹೇಳಿಕೆಯ ಪ್ರಕಾರ, ರಾಜ್ಯ ಸರ್ಕಾರವು ಅಂದಾಜು 28,400 ಕೋಟಿ ರೂ ವೆಚ್ಚದ ಬೆಂಗಳೂರು ಹಂತ-3A ಗಾಗಿ ಸುಮಾರು 37 ಕಿ.ಮೀ.ಗಳನ್ನು ಒಳಗೊಂಡ ಪ್ರಸ್ತಾವನೆ ಸಲ್ಲಿಸಿದೆ.

Manohar Lal Khattar
ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ ಶಿವಕುಮಾರ್

ಮೆಟ್ರೋ ಹಂತ-3A ಜಾಲದ ವೆಚ್ಚದ ಅಂದಾಜನ್ನು ತಜ್ಞ ಸಂಸ್ಥೆ ಪರಿಶೀಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರವು ಈಗಾಗಲೇ ನಿರ್ದೇಶನಗಳನ್ನು ನೀಡಿದೆ. ಕರ್ನಾಟಕ ಸರ್ಕಾರದಿಂದ ಉತ್ತರ ಬಂದ ನಂತರ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಮಂಜೂರು ಮಾಡುತ್ತದೆ ಎಂದು ಅವರು ಹೇಳಿದರು.

ತ್ಯಾಜ್ಯ ನಿರ್ವಹಣೆ (legacy waste management)ಯ ಸಮಸ್ಯೆಯನ್ನು ಪರಿಹರಿಸಲು ಮತ್ತು ನೀರಿನ ಮರುಬಳಕೆ ಮತ್ತು ಸುಸ್ಥಿರತೆಯನ್ನು ಉತ್ತೇಜಿಸಲು ಮನೋಹರ್ ಲಾಲ್ ಖಟ್ಟರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಅಂತೆಯೇ ಸಾಮೂಹಿಕ ಸಾರಿಗೆ ಕಾರಿಡಾರ್‌ಗಳಲ್ಲಿ ಹೆಚ್ಚಿನ FAR (ನೆಲದ ಪ್ರದೇಶ ಅನುಪಾತ) ವನ್ನು ಅನುಮತಿಸುವುದನ್ನು ಅವರು ಒತ್ತಿ ಹೇಳಿದರು. ಇದು ನಗರಗಳನ್ನು ಮರುರೂಪಿಸುತ್ತದೆ, ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಸುಧಾರಿಸುತ್ತದೆ ಎಂದರು.

"ರಾಜ್ಯದ ನಿಧಿಯ ಅಗತ್ಯತೆಯ ಕುರಿತ ಚರ್ಚೆಯ ಸಂದರ್ಭದಲ್ಲಿ, ಭಾರತ ಸರ್ಕಾರದ ಅನುಮೋದಿತ ಯೋಜನೆಗಳ ಜೊತೆಗೆ, ಕೇಂದ್ರ ಸಚಿವರು "ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ ಸಹಾಯ ಯೋಜನೆ (SSASCI) 2025-26" ಅಡಿಯಲ್ಲಿ 50 ವರ್ಷಗಳ ಬಡ್ಡಿರಹಿತ ಸಾಲವನ್ನು ಪಡೆಯಲು ಸುಧಾರಣೆಗಳನ್ನು ಕೈಗೊಳ್ಳಲು ರಾಜ್ಯವನ್ನು ಪ್ರೋತ್ಸಾಹಿಸಿದರು" ಎಂದು ಅಧಿಕೃತ ಹೇಳಿಕೆಯಲ್ಲಿ ಸೇರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com