ವರುಣಾರ್ಭಟಕ್ಕೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ: ಕುಮಟಾ-ಶಿರಸಿ ಸಂಪರ್ಕ ಕಡಿತ

ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ.
Representational image
ಸಂಗ್ರಹ ಚಿತ್ರ
Updated on

ಕಾರವಾರ: ಅಬ್ಬರದ ಮಳೆಗೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು ಕುಮಟಾ – ಶಿರಸಿ ಸಂಪರ್ಕ ಕಡಿತಗೊಂಡಿದೆ.

ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ. ಅಬ್ಬರದ ಮಳೆಯಿಂದ ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರು ಕೂಡ ಎಚ್ಚರದಿಂದ ಇರುವಂತೆ ಮನವಿ ಮಾಡಿದ್ದಾರೆ.

Representational image
ಬೆಂಗಳೂರಿನಲ್ಲಿ ಭಾರೀ ಮಳೆ ಬೆನ್ನಲ್ಲೇ ರೋಗ ಹರಡುವಿಕೆ ತಡೆಯಲು BBMP ಮುಂಜಾಗ್ರತಾ ಕ್ರಮ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com