ಮೈಸೂರು: ಪ್ರಿಯಕರನ ಜೊತೆ ಮಗಳು ಪರಾರಿ; ಮನನೊಂದು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ತಮ್ಮ ಹಿರಿಯ ಮಗಳು ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೆರೆ
ಕೆರೆ
Updated on

ಮೈಸೂರು: ತಮ್ಮ ಹಿರಿಯ ಮಗಳು ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಕೆರೆಯಲ್ಲಿ ಮುಳುಗಿ ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು ಸೇರಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ ಅವರ ಹಿರಿಯ ಮಗಳು ಅರ್ಪಿತಾ ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಈ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆ
ಹಾಸನ: ಬೇಲೂರಿನಲ್ಲಿ ಮಹಿಳೆಯನ್ನು ತುಳಿದು ಕೊಂದ ಆನೆ; ಮೂರು ತಿಂಗಳಲ್ಲಿ ಐವರ ಸಾವು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com