'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧ BJP-ಕನ್ನಡಪರ ಸಂಘಟನೆಗಳ ಕಿಡಿ, ಕ್ಷಮೆಯಾಚನೆಗೆ ಆಗ್ರಹ

ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್ ಹಾಸನ್ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ.
ಕಾಲಿವುಡ್ ನಟ ಕಮಲ್ ಹಾಸನ್
ಕಾಲಿವುಡ್ ನಟ ಕಮಲ್ ಹಾಸನ್
Updated on

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಅವರು ಹೇಳಿದ್ದು, ಹೇಳಿಕೆ ಸಂಬಂಧ ಬಿಜೆಪಿ ಹಾಗೂ ಕನ್ನಡಪರ ಸಂಘಟನೆಗಳು ತೀವ್ರವಾಗಿ ಕಿಡಿಕಾರುತ್ತಿವೆ. ಅಲ್ಲದೆ, ನಟ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತಿವೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಮಲ್ ಹಾಸನ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ, ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್ ಹಾಸನ್ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಭಾರತವೂ ಸೇರಿದಂತೆ ವಿಶ್ವದ ಹತ್ತು -ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತು ಶತಾಶತಮಾನಗಳಿಂದಲೂ ಪಡಿಮೂಡಿದೆ. ಜಗತ್ತಿನ ಭಾಷೆಗಳಲ್ಲಿ ಕನ್ನಡಕ್ಕೆ ಸರ್ವ ಶ್ರೇಷ್ಠ ಮಾನ್ಯತೆ ಇದೆ ಎಂಬ ಕನಿಷ್ಠ ತಿಳುವಳಿಕೆ ಕಮಲ್ ಹಾಸನ್ ರಂತಹ ಸಂಕುಚಿತ ವ್ಯಕ್ತಿತ್ವವಿರುವ ದುರಾಭಿಮಾನಿ ವ್ಯಕ್ತಿಗಳಿಗೆ ತಿಳಿದಿರಲಿ. ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ, ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆಯನ್ನು ಮರೆತಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ.

ಕಾಲಿವುಡ್ ನಟ ಕಮಲ್ ಹಾಸನ್
'ತಮಿಳಿನಿಂದ ಕನ್ನಡ ಹುಟ್ಟಿತು': ಶಿವಣ್ಣನ ಎದುರೇ ಕಮಲ್ ಹಾಸನ್ ಹೇಳಿಕೆ; ವಿವಾದ ಸೃಷ್ಟಿ, Video!

ದಕ್ಷಿಣ ಭಾರತದಲ್ಲಿ ಸಾಮರಸ್ಯತೆಯನ್ನು ಬೆಸೆಯಬೇಕಾದ ಕಮಲ್ ಹಾಸನ್ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುತ್ತಿದ್ದರು. ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು ಕನ್ನಡವನ್ನು ಅಪಮಾನಿಸಿದ್ದಾರೆ. ಈ ಕೂಡಲೇ ಕಮಲ್ ಹಾಸನ್ ಅವರು ಈ ಕೂಡಲೇ ಬೇಷರತ್ ಕನ್ನಡಿಗರ ಕ್ಷಮೆ ಕೇಳಬೇಕು.

ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿತು ಎಂಬುದನ್ನು ವ್ಯಾಖ್ಯಾನಿಸಲು ಕಮಲ್ ಹಾಸನ್ ಇತಿಹಾಸ ತಜ್ಞರೇನೂ ಅಲ್ಲ. ಆದರೆ, ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಇರುವ ಕನ್ನಡ ಭಾಷೆ ಭಾರತದ ಭೂಪಟದಲ್ಲಿ ಸಮೃದ್ಧತೆಯನ್ನು ಸಂಕೇತಿಸುತ್ತದೆ, ಸೌಹಾರ್ದತೆಯನ್ನು ಪ್ರತಿನಿಧಿಸುತ್ತಿದೆ. ಕನ್ನಡಿಗರು ಭಾಷಾ ದ್ವೇಷಿಗಳಲ್ಲ, ಆದರೆ ಕನ್ನಡ ನಾಡು, ನುಡಿ, ಜನ, ಜಲ, ವಿಚಾರಗಳು ಬಂದಾಗ ಸ್ವಾಭಿಮಾನವನ್ನು ಎಂದಿಗೂ ಬಲಿ ಕೊಟ್ಟಿಲ್ಲ ಎಂಬ ಸತ್ಯ ವಿವೇಕ ಸುಟ್ಟುಕೊಂಡವರಂತೆ ಮಾತನಾಡಿರುವ ಕಮಲ್ ಹಾಸನ್ ಅವರಿಗೆ ನೆನಪಿರಲಿ ಎಂದು ತಿಳಿಸಿದ್ದಾರೆ.

ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರು ಮಾತನಾಡಿ, ಸಂಘಟನೆಯ ಸದಸ್ಯರು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಕ್ಷಮೆಯಾಚನೆಗೆ ಆಗ್ರಹಿಸಬೇಕಿತ್ತು. ಆದರೆ, ನಟನನ್ನು ಭೇಟಿಯಾಗುವ ಮೊದಲೇ ಅವರು ಸ್ಥಳದಿಂದ ನಿರ್ಗಮಿಸಿದ್ದರು ಎಂದು ಹೇಳಿದ್ದಾರೆ.

ನೀವು ಕರ್ನಾಟಕದಲ್ಲಿ ವ್ಯವಹಾರ ಮಾಡಲು ಮತ್ತು ನಿಮ್ಮ ಸಿನಿಮಾಗಳನ್ನು ಪ್ರದರ್ಶಿಸಲು ಬಯಸುತ್ತಿರುವುದೇ ಆದರೆ, ಕನ್ನಡ ಮತ್ತು ಕನ್ನಡಿಗರನ್ನು ಅವಮಾನಿಸುವುದನ್ನು ನಿಲ್ಲಿಸಿ. ನಿಮ್ಮ ಸಿನಿಮಾ ಪ್ರಚಾರ ಮಾಡಲು ಇಲ್ಲಿಗೆ ಬಂದಿದ್ದಿರಿ. ವಿವಾದಾದ್ಮಕ ಹೇಳಿಕೆ ಬಳಿಕ ಕರ್ನಾಟಕ ರಕ್ಷಣಾ ವೇದಿಕೆ ಅವರ ಮುಖಕ್ಕೆ ಕಪ್ಪು ಮಸಿ ಬಳಿಯಲು ಸ್ಥಳಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಸ್ಥಳದಿಂದ ನಿರ್ಗಮಿಸಿದ್ದರು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com