Casual Images
ಸಾಂದರ್ಭಿಕ ಚಿತ್ರ

COVID-19: ರಾಜ್ಯದಲ್ಲಿ ಇಂದು 40 ಜನರಿಗೆ ಕೊರೋನಾ ಸೋಂಕು ದೃಢ; ಒಟ್ಟು ಪ್ರಕರಣಗಳ ಸಂಖ್ಯೆ 211ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ. ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 126 ಆಗಿದ್ದು, 14 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Published on

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 211ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ. ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 126 ಆಗಿದ್ದು, 14 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜನವರಿ 1 ರಿಂದ ಇಲ್ಲಿಯವರೆಗೂ ಒಟ್ಟಾರೇ 84 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ಒಟ್ಟು 395 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 344 RTPCR ಹಾಗೂ 51 RAT ಪರೀಕ್ಷೆ ಆಗಿದ್ದು, ಪಾಸಿಟಿವಿಟಿ ದರ ಶೇ. 10. 12 ರಷ್ಟಿದ್ದು, ಸಾವಿನ ದರ ಶೂನ್ಯವಾಗಿದೆ.

Casual Images
ಸರ್ಕಾರದಿಂದಲೇ ಇನ್ನು ಮುಂದೆ 108 ಆಂಬ್ಯುಲೆನ್ಸ್ ಸೇವೆ: ಸಚಿವ ದಿನೇಶ್​ ಗುಂಡೂರಾವ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com