ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನು ನಿಷೇಧಿಸಿ: ಫಿಲ್ಮ್ ಚೇಂಬರ್‌ಗೆ ಸಚಿವ ಶಿವರಾಜ್ ತಂಗಡಗಿ ಪತ್ರ

ಕಮಲ್ ಹಾಸನ್ ಅವರು ಓರ್ವ ಹಿರಿಯ ನಟರಾಗಿ ಕನ್ನಡ ಭಾಷೆಯ ಹಲವು ಚಿತ್ರಗಳಲ್ಲಿ ನಟಿಸಿ ಕನ್ನಡ ಭಾಷೆಯ ಬಗೆ, ತಿಳಿದವರಾಗಿದ್ದು, ಈ ರೀತಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ.
Minister Shivaraj Thangadagi
ಸಚಿವ ಶಿವರಾಜ್ ತಂಗಡಗಿ
Updated on

ಬೆಂಗಳೂರು: ನಟ ಕಮಲ್ ಹಾಸನ್ ಅವರು ಕನ್ನಡಿಗರ ಕ್ಷಮೆಯಾಚಿಸದಿದ್ದಲ್ಲಿ ಅವರು ನಟಿಸುವ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿಷೇಧ ಹೇರಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್‌ ತಂಗಡಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

ತಮಿಳು ಚಿತ್ರರಂಗದ ನಟ ಕಮಲ್ ಹಾಸನ್ ಅವರು ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಕನ್ನಡ ಭಾಷೆಯ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಕನ್ನಡ ಭಾಷೆಯ ಕುರಿತಾಗಿ ಮಾತನಾಡಿರುವುದು ಕನ್ನಡಿಗರಿಗೆ ಹಾಗೂ ನನಗೆ ತೀವ್ರ ನೋವಾಗಿದೆ. ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆಯುಂಟಾಗಿದೆ.

ಕಮಲ್ ಹಾಸನ್ ಅವರು ಓರ್ವ ಹಿರಿಯ ನಟರಾಗಿ ಕನ್ನಡ ಭಾಷೆಯ ಹಲವು ಚಿತ್ರಗಳಲ್ಲಿ ನಟಿಸಿ ಕನ್ನಡ ಭಾಷೆಯ ಬಗೆ, ತಿಳಿದವರಾಗಿದ್ದು, ಈ ರೀತಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ. ಕನ್ನಡದ ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ಯಾರೇ, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅವರಿಂದ ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಆದ್ದರಿಂದ ಕಮಲ್ ಹಾಸನ್ ಅವರು ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು.

ಕಮಲ್ ಹಾಸನ್ ಅವರು ರಾಜ್ಯದ ಜನರು/ ಕನ್ನಡಿಗರ ಕ್ಷಮೆಯಾಚಿಸದಿದ್ದಲ್ಲಿ ಅವರು ನಟಿಸಿರುವ ಚಲನ ಚಿತ್ರಗಳಿಗೆ ಕರ್ನಾಟಕದಲ್ಲಿ ಕೂಡಲೇ ನಿರ್ಬಂಧ ವಿಧಿಸಬೇಕೆಂದು ಈ ಮೂಲಕ ತಿಳಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Minister Shivaraj Thangadagi
'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ನಟ ಶಿವರಾಜ್ ಕುಮಾರ್ ಹೇಳಿದ್ದೇನು?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com