ಬೆಳಗಾವಿ: ಲೋಕೇಶ್ವರ ಸ್ವಾಮೀಜಿ ವಿರುದ್ಧ ಅಪಹರಣ- ಅತ್ಯಾಚಾರ ಕೇಸ್; ರಾಮ ಮಂದಿರ ಮಠ ಧ್ವಂಸ

ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ ಗೈರಾಣ (ಗೋಮಾಳ) ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಲೋಕೇಶ್ವರ ಸ್ವಾಮೀಜಿ ಅಕ್ರಮವಾಗಿ ಮಠ ನಿರ್ಮಿಸಿಕೊಂಡಿದ್ದರ ಕುರಿತು ದೂರು ಕೇಳಿ ಬಂದಿತ್ತು‌.
A bulldozer razes self-proclaimed seer Hathyogi Lokeshwar Swami’s illegal Ram Mandir Mutt
ಲೋಕೇಶ್ವರ ಸ್ವಾಮೀಜಿಗೆ ಸೇರಿದ ಮಠ ಧ್ವಂಸ
Updated on

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಆರೋಪದ ಮೇಲೆ ಸ್ವಯಂ ಘೋಷಿತ ಮಠಾಧೀಶ ಲೋಕೇಶ್ವರ ಸ್ವಾಮಿ ಅವರನ್ನು ಬಂಧಿಸಿದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಮಠಾಧೀಶರ ಅಕ್ರಮ ಆಶ್ರಮವನ್ನು ಕೆಡವಿದ್ದಾರೆ.

ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ ಗೈರಾಣ (ಗೋಮಾಳ) ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಲೋಕೇಶ್ವರ ಸ್ವಾಮೀಜಿ ಅಕ್ರಮವಾಗಿ ಮಠ ನಿರ್ಮಿಸಿಕೊಂಡಿದ್ದರ ಕುರಿತು ದೂರು ಕೇಳಿ ಬಂದಿತ್ತು‌.

ಇದರ ಕುರಿತು ಪರಿಶೀಲನೆ ನಡೆಸಿದ ರಾಯಬಾಗ ತಹಶಿಲ್ದಾರರ ಮಠ ತೆರವುಗೊಳಿಸುವಂತೆ ಕಳೆದ ವಾರ ನೋಟಿಸ್ ನೀಡಿದ್ದರು. ರಾಯಬಾಗ ತಹಶಿಲ್ದಾರರ ಸುರೇಶ ಮುಂಜೆ ಸಮ್ಮುಖದಲ್ಲಿ ಮೂರು ಜೆಸಿಬಿ ಬಳಸಿ ಮಠವನ್ನ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಮಠಾಧೀಶರ ಇತ್ತೀಚಿನ ಬಂಧನ ಮತ್ತು ನ್ಯಾಯಾಂಗ ಬಂಧನದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ಬೆಳಗಿನ ಜಾವದ ಮೊದಲು ಧ್ವಂಸ ಕಾರ್ಯಾಚರಣೆಯನ್ನು ನಡೆಸಿದರು. ಮೂರು ಬುಲ್ಡೋಜರ್‌ಗಳನ್ನು ಬಳಸಿ ಮಠವನ್ನು ಕೆಡವಲಾಯಿತು. ಈ ಕಾರ್ಯಾಚರಣೆಯಲ್ಲಿ ಮಠಕ್ಕೆ ಸಂಬಂಧಿಸಿದ ದೇವಾಲಯದ ಸಂಪೂರ್ಣ ಧ್ವಂಸ ಮಾಡಲಾಗಿದೆ.

A bulldozer razes self-proclaimed seer Hathyogi Lokeshwar Swami’s illegal Ram Mandir Mutt
ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮಿ ಬಂಧನ

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com