Hemavati Link Canal: ಅವೈಜ್ಞಾನಿಕ ಕಾಮಗಾರಿಯನ್ನು ಕೂಡಲೇ ನಿಲ್ಲಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯು ತುಮಕೂರು ಭಾಗದ ರೈತರಿಗೆ ಶಾಪವಾಗಿ ಪರಿಣಮಿಸಲಿದೆ.
Union Minister V. Somanna
ಕೇಂದ್ರ ಸಚಿವ ವಿ.ಸೋಮಣ್ಣ
Updated on

ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯವಾಗುತ್ತಿದ್ದು, ತಕ್ಷಣ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ಸರ್ಕಾರಕ್ಕೆ ಗುರುವಾರ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯು ತುಮಕೂರು ಭಾಗದ ರೈತರಿಗೆ ಶಾಪವಾಗಿ ಪರಿಣಮಿಸಲಿದೆ. ಈ ಕೆನಾಲ್ ನಿರ್ಮಾಣದಿಂದ ಹೈಡ್ರಾಲಿಕ್ ಹೆಡ್ ಕುಸಿದು ಸಕಾಲದಲ್ಲಿ ನೀರು ಪೂರೈಕೆಯಲ್ಲಿ ಕೊರತೆಯಾಗುವ ಆತಂಕದ ಬಗ್ಗೆ ಈ ಭಾಗದ ರೈತರು/ತಂತ್ರಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ರಾಜ್ಯ ಸರ್ಕಾರ ಈ ಬಗ್ಗೆ ಮೃದು ಧೋರಣೆ ತಳೆದಿರುವುದು ಖಂಡನೀಯ ಎಂದು ಹೇಳಿದ್ದಾರೆ.

ತುಮಕೂರಿನ ರೈತರ ನೆಮ್ಮದಿ ಕೆಡಿಸುವ ಈ ಅವೈಜ್ಞಾನಿಕ ಯೋಜನೆಯ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಈ ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಮೇ 31, 2025ರ ಒಳಗಾಗಿ ಯೋಜನೆ ವಾಪಾಸು ಪಡೆಯದಿದ್ದಲ್ಲಿ ಮುಂದೆ ಉದ್ಭವಿಸುವ ತೊಂದರೆಗಳಿಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆಯಾಗಬೇಕಾಗುತ್ತದೆ ಎಂದೂ ಎಚ್ಚರಿಸಿದ್ದಾರೆ.

Union Minister V. Somanna
ಜನೌಷಧಿ ಕೇಂದ್ರ ಮುಚ್ಚಬೇಡಿ: ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಸೋಮಣ್ಣ ಮನವಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com