Belagavi will never go to Maharashtra: Siddaramaiah
ಸಿದ್ದರಾಮಯ್ಯ

ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರುವುದಿಲ್ಲ; ಮಹಾಜನ ಸಮಿತಿ ವರದಿಯೇ ಅಂತಿಮ!

ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಯಿಂದ ಐದು ಶಾಸಕರು ಆಯ್ಕೆಯಾಗಿದ್ದರು. ಆದರೆ ಈಗ ಅವರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
Published on

ಬೆಂಗಳೂರು: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಮಹಾರಾಷ್ಟ್ರದೊಂದಿಗೆ ವಿಲೀನಗೊಳ್ಳಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರತಿಪಾದಿಸಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ನಡೆದ ಭುವನೇಶ್ವರಿ ಮತ್ತು ಅಣ್ಣಮ್ಮ ದೇವಿಯ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾಜನ ಸಮಿತಿ ವರದಿಯೇ ಅಂತಿಮ ಎಂದರು.

"ಬೆಳಗಾವಿ ವಿಷಯದಲ್ಲಿ ಬಗ್ಗೆ ಯಾವುದೇ ರಾಜಿ ಇಲ್ಲ. ಮಹಾರಾಷ್ಟ್ರ ಸರ್ಕಾರ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದರೆ ಮಹಾಜನ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ ಮತ್ತು ಕರ್ನಾಟಕದ ಭಾಗವಾಗಿರುವುದರಿಂದ ನಾವು ಅದನ್ನು ಬಿಡುವುದಿಲ್ಲ" ಎಂದರು.

ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಯಿಂದ ಐದು ಶಾಸಕರು ಆಯ್ಕೆಯಾಗಿದ್ದರು. ಆದರೆ ಈಗ ಅವರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Belagavi will never go to Maharashtra: Siddaramaiah
ಕೇಂದ್ರ ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಹೇರುತ್ತಿದೆ; ಆದ್ರೆ ರಾಜ್ಯದ ಮದರಸಗಳಲ್ಲೂ ಕನ್ನಡ ಕಲಿಸುತ್ತಿದ್ದೇವೆ!

"ಎಂಇಎಸ್ ಜನರು ಸಹ ಕನ್ನಡಿಗರು. ಅವರಲ್ಲಿ ಯಾರಾದರೂ ರೌಡಿಸಂನಲ್ಲಿ ತೊಡಗಿದರೆ, ನಾವು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ಸಿಎಂ ಹೇಳಿದರು.

ಗಡಿ ಪ್ರದೇಶಗಳಲ್ಲಿನ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲವನ್ನೂ ಮಾಡಲು ಸರ್ಕಾರ ಸಿದ್ಧವಾಗಿದೆ ಎಂದು ಅವರು ಕನ್ನಡ ಕಾರ್ಯಕರ್ತರಿಗೆ ತಿಳಿಸಿದರು.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ದಶಕಗಳಿಂದ ಮುಂದುವರೆದಿದೆ. ನೆರೆಯ ರಾಜ್ಯವು ಬೆಳಗಾವಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಮರಾಠಿ ಮಾತನಾಡುವ ಜನಸಂಖ್ಯೆಯನ್ನು ಗಣನೀಯವಾಗಿ ಉಲ್ಲೇಖಿಸಿ ಹಕ್ಕು ಸಾಧಿಸುತ್ತಿದೆ.

ಮಹಾಜನ ಸಮಿತಿ ವರದಿಯನ್ನು ಉಲ್ಲೇಖಿಸಿ ಕರ್ನಾಟಕವು ಮಹಾರಾಷ್ಟ್ರದ ಹಕ್ಕನ್ನು ತಿರಸ್ಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com