ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ; ಇಬ್ಬರ ಸ್ಥಿತಿ ಗಂಭೀರ!

ನಗರದ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಬಂದಂತೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
Rajyostava procession
ರಾಜ್ಯೋತ್ಸವ ಮೆರವಣಿಗೆ
Updated on

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಕುಂದಾನಗರಿ ಬೆಳಗಾವಿಯಲ್ಲಿ ಶನಿವಾರ ಆತಂಕಕಾರಿ ಘಟನೆಯೊಂದು ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದಿದ್ದಾರೆ.

ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಬಂದಂತೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಗರದ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡುತ್ತಾ ಯುವಕರ ಗುಂಪು ನೃತ್ಯ ಮಾಡುತ್ತಿತ್ತು. ಏಕಾಏಕಿ ಗುಂಪಿಗೆ ನುಗ್ಗಿದ ಕೆಲವರು ಜನಸಂದಣಿಯಲ್ಲೇ ಚಾಕು ಹಾಗೂ ಜಂಬೆಗಳಿಂದ ಚುಚ್ಚಿದರು. ಯುವಕರು ನೆಲಕ್ಕೆ ಬಿದ್ದು ರಕ್ತಸ್ರಾವದಿಂದ ಒದ್ದಾಡುತ್ತಿದ್ದಂತೆಯೇ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಗಾಯಗೊಂಡವರನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಹಾಗೂ ನಜೀರ್ ಪಠಾಣ್ ಎಂದು ಗುರುತಿಸಲಾಗಿದೆ. ತಲೆ, ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಚಾಕು ಇರಿತದಿಂದ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಭೂಷಣ ಭೊರಸೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Rajyostava procession
ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು: ಸಿಎಂ ಸಿದ್ದರಾಮಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com