ಸುರಂಗ ರಸ್ತೆಗೆ ಆರ್.ಅಶೋಕ್ ನೇತೃತ್ವದಲ್ಲಿ ಸಮಿತಿ ರಚಿಸಲು ಸಿದ್ಧ: ಡಿ.ಕೆ.ಶಿವಕುಮಾರ್

ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದಲ್ಲಿ ಸುರಂಗ ರಸ್ತೆಗೆ ಸಮಿತಿ ರಚಿಸಲು ಸಿದ್ಧನಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್‌ಬಾಗ್ ಬಳಿ ಪ್ರವೇಶ-ನಿರ್ಗಮನ ತಾಣ ರೂಪಿಸಲಾಗುವುದು.
DK Shivakumar
ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ನಗರದಲ್ಲಿ ಸುರಂಗ ರಸ್ತೆ (ಟನಲ್ ರೋಡ್) ವಿಚಾರವಾಗಿ ವಿಪಕ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ಸಿದ್ಧ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಹೇಳಿದರು.

ಕಂಠೀರವ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರು, ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದಲ್ಲಿ ಸುರಂಗ ರಸ್ತೆಗೆ ಸಮಿತಿ ರಚಿಸಲು ಸಿದ್ಧನಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್‌ಬಾಗ್ ಬಳಿ ಪ್ರವೇಶ-ನಿರ್ಗಮನ ತಾಣ ರೂಪಿಸಲಾಗುವುದು ಎಂದು ಹೇಳಿದರು,

ಅಶೋಕ್ ಅವರು ಸುರಂಗ ರಸ್ತೆ ನಿರ್ಮಾಣ ವಿರೋಧಿಸಿ ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಜಯಗಳಿಸಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ಸುರಂಗ ರಸ್ತೆಗೆ ಸಮಿತಿ ರಚಿಸಲು ಸಿದ್ಧನಿದ್ದೇನೆ. ಸಮಿತಿಯು ಸರ್ಕಾರಕ್ಕೆ ಸಲಹೆಗಳು ಮತ್ತು ನಿರ್ದೇಶನಗಳನ್ನು ನೀಡಲಿ. ಅವರು ಶಿಫಾರಸು ಮಾಡುವ ಯಾವುದೇ ಸದಸ್ಯರನ್ನು ನಾವು ಸೇರಿಸಿಕೊಳ್ಳುತ್ತೇವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ತಿಳಿಸಿದರು.

ಶುಕ್ರವಾರ ಲಾಲ್‌ಬಾಗ್‌ನ ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ನಾನೇ ಖುದ್ದಾಗಿ ಪರಿಶೀಲಿಸಿದ್ದೇನೆ. ಪರ್ಯಾಯ ಯೋಜನೆಗಳನ್ನು ನಾವು ಮೌಲ್ಯಮಾಪನ ಮಾಡುತ್ತಿದ್ದೇವೆ, ಚಿಂತಿಸುವ ಅಗತ್ಯವಿಲ್ಲ ಎಂದರು.

ಟನಲ್ ಯೋಜನೆಯನ್ನು ಅಶೋಕ್ ಅವರೂ ಗಮನಿಸಲಿ. ಬಿಜೆಪಿ ಶಾಸಕ ಅಶ್ವಥ ನಾರಾಯಣ್ ಸೇರಿದಂತೆ ಬೇರೆ ಯಾರ ಹೆಸರನ್ನು ಸೂಚಿಸಿದರೂ ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ ಎಂದು ಹೇಳಿದರು.

DK Shivakumar
ನಾಯಕತ್ವ ಬದಲಾವಣೆ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ.ಶಿವಕುಮಾರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com