ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಬೆಳಗಾವಿ ಪಟ್ಟಣ ಸಂಪೂರ್ಣ ಸ್ಥಬ್ಧ, ಸರ್ಕಾರಕ್ಕೆ BJP ಎಚ್ಚರಿಕೆ-Video

ಕನ್ನಡ ಸಂಘಟನೆಗಳ ಬೆಂಬಲದೊಂದಿಗೆ ರೈತರು ಅಥಣಿಯಲ್ಲಿ ಬಂದ್‌ಗೆ ಕರೆ ನೀಡಿದ್ದು, ಇದು ಚಿಕ್ಕೋಡಿ, ಗುರ್ಲಾಪುರ, ಜಂಬೋಟಿ ಮತ್ತು ಗೋಕಾಕ್‌ಗೆ ವ್ಯಾಪಿಸಿ, ಸಾಮಾನ್ಯ ಜನಜೀವನ ಸ್ಥಗಿತಗೊಂಡಿದೆ.
A large gathering of sugarcane farmers stages an indefinite protest in Gurlapur, near Belagavi, on Tuesday.
ಬೆಳಗಾವಿ ಸಮೀಪದ ಗುರ್ಲಾಪುರದಲ್ಲಿ ಕಬ್ಬು ರೈತರು ಬೃಹತ್ ಸಂಖ್ಯೆಯಲ್ಲಿ ಸೇರಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.
Updated on

ಬೆಳಗಾವಿ: ನ್ಯಾಯಯುತ ಬೆಲೆ ನಿಗದಿ ಮತ್ತು ಬಾಕಿ ಹಣ ಪಾವತಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಮಹತ್ವದ ತಿರುವು ಪಡೆದುಕೊಂಡಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ ಮತ್ತು ಹಲವಾರು ಪಟ್ಟಣಗಳಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ. ಇಂದು ಬುಧವಾರ ಕೂಡ ತೀವ್ರ ಪ್ರತಿಭಟನೆ ಮುಂದುವರಿದಿದೆ.

ಕನ್ನಡ ಸಂಘಟನೆಗಳ ಬೆಂಬಲದೊಂದಿಗೆ ರೈತರು ಅಥಣಿಯಲ್ಲಿ ಬಂದ್‌ಗೆ ಕರೆ ನೀಡಿದ್ದು, ಇದು ಚಿಕ್ಕೋಡಿ, ಗುರ್ಲಾಪುರ, ಜಂಬೋಟಿ ಮತ್ತು ಗೋಕಾಕ್‌ಗೆ ವ್ಯಾಪಿಸಿ, ಸಾಮಾನ್ಯ ಜನಜೀವನ ಸ್ಥಗಿತಗೊಂಡಿದೆ. ಅಂಗಡಿಗಳು ಮತ್ತು ವ್ಯವಹಾರಗಳು ಸ್ವಯಂಪ್ರೇರಣೆಯಿಂದ ಮುಚ್ಚಲ್ಪಟ್ಟಿದ್ದರೆ, ಗೋಕಾಕ್-ಅಥಣಿ ರಸ್ತೆ ಮತ್ತು ದರೂರ್-ಹಲ್ಯಾಲ್ ಸೇತುವೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ರೈತರು ಪ್ರಮುಖ ಹೆದ್ದಾರಿಗಳನ್ನು ತಡೆದರು.

ಹುಕ್ಕೇರಿಯಲ್ಲಿ, ಕಬ್ಬಿಗೆ ಪರಿಷ್ಕೃತ ಕನಿಷ್ಠ ಬೆಲೆ ನೀಡುವಂತೆ ಒತ್ತಾಯಿಸಿ ರೈತ ಸಂಘಗಳು ಸಂಪೂರ್ಣ ಬಂದ್ ನಡೆಸಿವೆ. ಪ್ರತಿಭಟನಾಕಾರರು ಅಡವಿಸಿದ್ದೇಶ್ವರ ಮಠದಿಂದ ಕೋರ್ಟ್ ವೃತ್ತದವರೆಗೆ ಬೃಹತ್ ರ್ಯಾಲಿ ನಡೆಸಿದ್ದರಿಂದ ಪಟ್ಟಣವು ಸಂಪೂರ್ಣವಾಗಿ ಸ್ತಬ್ಧಗೊಂಡಿತು. ಇದು ಹೆದ್ದಾರಿ ತಡೆ ಮತ್ತು ರಾತ್ರಿಯಿಡೀ ಧರಣಿ ಪ್ರತಿಭಟನೆಯಲ್ಲಿ ಕೊನೆಗೊಂಡಿತು. ರೈತರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ, ಮಣ್ಣು ತೆಗೆಯುವ ಉಪಕರಣಗಳನ್ನು ರಸ್ತೆಗಳಿಗೆ ಅಡ್ಡಲಾಗಿ ನಿಲ್ಲಿಸಿದ್ದರಿಂದ ಪೊಲೀಸರು ಪರ್ಯಾಯ ಮಾರ್ಗಗಳ ಮೂಲಕ ವಾಹನ ಸಂಚಾರವನ್ನು ತಿರುಗಿಸಿದರು.

A large gathering of sugarcane farmers stages an indefinite protest in Gurlapur, near Belagavi, on Tuesday.
ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; 3,500 ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ; ಬಿಜೆಪಿ ಬೆಂಬಲ; Video

ವಿಜಯೇಂದ್ರ ಬೆಂಬಲ

ಶಿವಯೋಗಿ ವೃತ್ತದಲ್ಲಿ, ನೂರಾರು ಪ್ರತಿಭಟನಾಕಾರರು ಜಂಬೋಟಿ-ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಯನ್ನು ತಡೆದರು, ಅಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಒಗ್ಗಟ್ಟಿನ ಪ್ರದರ್ಶನ ನಡೆಸಿದರು. ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು, ರೈತರ ಸಂಕಷ್ಟವನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಇಂದು ರೈತರು ಭಾರೀ ಮಳೆಯಿಂದ ಬೆಳೆ ಕಳೆದುಕೊಂಡು ಸಂಕಷ್ಟಪಡುತ್ತಿದ್ದಾರೆ. ಆದರೆ ಯಾವುದೇ ಸಚಿವರು, ಉಸ್ತುವಾರಿ ಸಚಿವರು ಅಥವಾ ಕಂದಾಯ ಸಚಿವರು ಸಹ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿಲ್ಲ. ರೈತರು ಮತ್ತೆ ಬೀದಿಗಿಳಿಯುವಂತೆ ಸರ್ಕಾರವೇ ಮಾಡಿದೆ. ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಆರೋಪಿಸಿದರು.

ರೈತರ ಬೇಡಿಕೆಗಳೇನು?

ಸರ್ಕಾರವು ಕಬ್ಬಿಗೆ ಪ್ರತಿ ಟನ್‌ಗೆ 3,500 ರೂಪಾಯಿ ಬೆಂಬಲ ಬೆಲೆಯಾಗಿ ಘೋಷಿಸಬೇಕು ಮತ್ತು ಬಾಕಿ ಪಾವತಿಗಳನ್ನು ವಿಳಂಬವಿಲ್ಲದೆ ಪಾವತಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು. ನಾವು ಸರ್ಕಾರಕ್ಕೆ ಇಂದು ಸಂಜೆಯವರೆಗೆ ಸಮಯ ನೀಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲು ವಿಫಲವಾದರೆ, ರಾಜ್ಯಾದ್ಯಂತ ತೀವ್ರ ಆಂದೋಲನವನ್ನು ಪ್ರಾರಂಭಿಸುತ್ತೇವೆ ಎಂದು ನಿನ್ನೆ ಎಚ್ಚರಿಕೆ ನೀಡಿದ್ದರು.

ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆಯುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ಹೆದ್ದಾರಿಗಳು ನಿರ್ಬಂಧಿಸಲ್ಪಟ್ಟಿರುವುದರಿಂದ, ರೈತರ ಚಳವಳಿ ಈಗ ರಾಜ್ಯವು ಇತ್ತೀಚಿನ ದಿನಗಳಲ್ಲಿ ಕಂಡ ಅತಿದೊಡ್ಡ ಕೃಷಿ ಸಂಘರ್ಷಗಳಲ್ಲಿ ಒಂದಾಗಿ ಬೆಳೆದಿದೆ. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರಮುಖ ರಾಜಕೀಯ ಸವಾಲನ್ನು ಒಡ್ಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com