ಬೆಂಗಳೂರು: ಮನೆಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ; ಕಳ್ಳರ ಕೃತ್ಯ ಶಂಕೆ!

ಉತ್ತರಹಳ್ಳಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಶ್ರೀಲಕ್ಷ್ಮಿ ಎಂದು ಗುರುತಿಸಲಾಗಿದೆ.
Representative Picture
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 65 ವರ್ಷದ ಮಹಿಳೆಯೊಬ್ಬರನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಲಾಗಿದ್ದು, ಅವರ ಚಿನ್ನದ ಮಂಗಳಸೂತ್ರ ಕಾಣೆಯಾಗಿದ್ದರಿಂದ ಇದು ಕಳ್ಳರ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರಹಳ್ಳಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಶ್ರೀಲಕ್ಷ್ಮಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಕೆಲಸದಲ್ಲಿದ್ದ ಆಕೆಯ ಪತಿ ಅಶ್ವಥ್ ನಾರಾಯಣ್ ಅವರು ದೂರವಾಣಿ ಮೂಲಕ ಪತ್ನಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಪದೇ ಪದೇ ಕರೆ ಮಾಡಿದರೂ ಆಕೆ ಪ್ರತಿಕ್ರಿಯಿಸದಿದ್ದಾಗ, ಸಂಜೆ 5.30 ರ ಸುಮಾರಿಗೆ ಆಕೆಯ ಬಗ್ಗೆ ವಿಚಾರಿಸಲು ಅವರು ತಮ್ಮ ಬಾಡಿಗೆದಾರರನ್ನು ಕೇಳಿಕೊಂಡಿದ್ದಾರೆ. ಬಾಡಿಗೆದಾರರು ಪರಿಶೀಲಿಸಿದಾಗ, ಶ್ರೀಲಕ್ಷ್ಮಿ ಮನೆಯೊಳಗೆ ನೆಲದ ಮೇಲೆ ಪ್ರಜ್ಞಾಹೀನಳಾಗಿ ಬಿದ್ದಿರುವುದು ಕಂಡುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Representative Picture
ಬೆಂಗಳೂರು: ಕಿರುತೆರೆ ನಟಿಗೆ ಅಶ್ಲೀಲ ಸಂದೇಶ, ವಿಡಿಯೋ ಕಳುಹಿಸಿ ಕಿರುಕುಳ; ಆರೋಪಿ ಬಂಧನ!

"ಆಕೆಯ ಕುತ್ತಿಗೆ, ತುಟಿ ಮತ್ತು ಮುಖದ ಮೇಲೆ ಗಾಯಗಳಾಗಿದ್ದು, ಆಕೆಯ ಚಿನ್ನದ ಮಂಗಳಸೂತ್ರವೂ ಕಾಣೆಯಾಗಿದೆ" ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆಕೆಯನ್ನು ಕತ್ತು ಹಿಸುಕಿ ಕೊಂದಿರಬಹುದು ಎಂದು ತಿಳಿದು ಬಂದಿದೆ. ಕುಟುಂಬಕ್ಕೆ ಪರಿಚಿತರಾಗಿರುವ ಯಾರಾದರೂ ಮನೆಗೆ ನುಗ್ಗಿ ಆಕೆಯನ್ನು ಕೊಂದು ಆಭರಣಗಳೊಂದಿಗೆ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

"ದೂರಿನ ಆಧಾರದ ಮೇಲೆ, ನಾವು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಶಂಕಿತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com